<p>ರಾಯಚೂರು: ‘ಶಿಕ್ಷಕರ ಸಂಘದ ಚುನಾವಣೆಯ ಮತದಾರರ ಪಟ್ಟಿಯಿಂದ ನನ್ನ ಹೆಸರು ಹಾಗೂ ಪತಿ ಮಹಾಂತೇಶ ಬಿರಾದಾರ ಹೆಸರನ್ನು ಉದ್ದೇಶಪೂರ್ವಕವಾಗಿ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲೇಶ ನಾಯಕ ಕೈಬಿಟ್ಟಿದ್ದಾರೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯ ಸ್ಪರ್ಧಾಕಾಂಕ್ಷಿ ಪ್ರಮೀಳಾ ಪಾಟೀಲ ಆರೋಪಿಸಿದರು.</p>.<p>‘ಚುನಾವಣಾ ಪ್ರಕ್ರಿಯೆ ಸಂಪೂರ್ಣ ಅಕ್ರಮಗಳಿಂದ ಕೂಡಿದೆ. ನಾನು, ಪತಿ ಮಹಾಂತೇಶ ಬಿರಾದಾರ ಇಬ್ಬರೂ ಶಿಕ್ಷಕರಾಗಿದ್ದು, ಏಪ್ರಿಲ್ 3ರಂದು ಮತದಾರರ ಪಟ್ಟಿ ಪರಿಶೀಲಿಸಿದಾಗ ಇಬ್ಬರ ಹೆಸರೂ ಕಾಣಿಸಲಿಲ್ಲ. ಇದೇ ರೀತಿಯ ಘಟನೆ 5 ವರ್ಷಗಳ ಹಿಂದೆಯೂ ನಡೆದಿದ್ದು, ಆಗ 28 ಶಿಕ್ಷಕರ ಹೆಸರನ್ನು ಪಟ್ಟಿಯಿಂದ ತೆಗೆಯಲಾಗಿತ್ತು’ ಎಂದು ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.</p>.<p>‘ಚುನಾವಣೆ ಸಂಬಂಧ ಕನಿಷ್ಠ ಒಂದು ವಾರ ಮುಂಚಿತವಾಗಿ ಪ್ರಕಟಣೆ ನೀಡಬೇಕು. ಆದರೆ, ತಾಲ್ಲೂಕಿನಲ್ಲಿ ಚುನಾವಣಾಧಿಕಾರಿ ಯಾರು, ಚುನಾವಣೆ ಸ್ಥಳ ಯಾವುದು ಎಂಬುದನ್ನು ಗುಟ್ಟಾಗಿ ಇಡಲಾಗಿದೆ. ಇದು ಪ್ರಜಾಪ್ರಭುತ್ವದ ಮೂಲತತ್ವಗಳಿಗೆ ವಿರುದ್ಧವಾಗಿದೆ’ ಎಂದು ಆರೋಪಿಸಿದರು.</p>.<p>ಶಿಕ್ಷಕ ಮಹಾಂತೇಶ್ ಬಿರಾದಾರ ಮಾತನಾಡಿ,‘ಹಿಂದೆ ನನ್ನ ನೇತೃತ್ವದಲ್ಲಿ ಅಧಿಕಾರ ಅನುಭವಿಸಿದವರೇ ಈಗ ನನ್ನ ಹೆಸರನ್ನು ಕೈಬಿಟ್ಟು ನಂಬಿಕೆ ದ್ರೋಹ ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಈ ಸಂಬಂಧ ಈಗಾಗಲೇ ನ್ಯಾಯಾಲಯದ ಮೊರೆ ಹೋಗಿದ್ದು, ದಾಖಲೆಗಳೊಂದಿಗೆ ಮತ್ತೊಮ್ಮೆ ಹಾಜರಾಗುತ್ತೇವೆ. ನ್ಯಾಯ ಸಿಗುವ ವಿಶ್ವಾಸವಿದೆ. ನಾನು ಇರದಿದ್ದರೂ 10 ಸಾಮಾನ್ಯ ಹಾಗೂ 5 ಮಹಿಳಾ ಅಭ್ಯರ್ಥಿಗಳೊಂದಿಗೆ ಹಿರಿಯರಾದ ನಂದೀಶ್ ಅವರ ನೇತೃತ್ವದಲ್ಲಿ ಮತ್ತೆ ಚುನಾವಣೆಗೆ ಬರುತ್ತೇವೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-32-1472511582</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಶಿಕ್ಷಕರ ಸಂಘದ ಚುನಾವಣೆಯ ಮತದಾರರ ಪಟ್ಟಿಯಿಂದ ನನ್ನ ಹೆಸರು ಹಾಗೂ ಪತಿ ಮಹಾಂತೇಶ ಬಿರಾದಾರ ಹೆಸರನ್ನು ಉದ್ದೇಶಪೂರ್ವಕವಾಗಿ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲೇಶ ನಾಯಕ ಕೈಬಿಟ್ಟಿದ್ದಾರೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯ ಸ್ಪರ್ಧಾಕಾಂಕ್ಷಿ ಪ್ರಮೀಳಾ ಪಾಟೀಲ ಆರೋಪಿಸಿದರು.</p>.<p>‘ಚುನಾವಣಾ ಪ್ರಕ್ರಿಯೆ ಸಂಪೂರ್ಣ ಅಕ್ರಮಗಳಿಂದ ಕೂಡಿದೆ. ನಾನು, ಪತಿ ಮಹಾಂತೇಶ ಬಿರಾದಾರ ಇಬ್ಬರೂ ಶಿಕ್ಷಕರಾಗಿದ್ದು, ಏಪ್ರಿಲ್ 3ರಂದು ಮತದಾರರ ಪಟ್ಟಿ ಪರಿಶೀಲಿಸಿದಾಗ ಇಬ್ಬರ ಹೆಸರೂ ಕಾಣಿಸಲಿಲ್ಲ. ಇದೇ ರೀತಿಯ ಘಟನೆ 5 ವರ್ಷಗಳ ಹಿಂದೆಯೂ ನಡೆದಿದ್ದು, ಆಗ 28 ಶಿಕ್ಷಕರ ಹೆಸರನ್ನು ಪಟ್ಟಿಯಿಂದ ತೆಗೆಯಲಾಗಿತ್ತು’ ಎಂದು ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.</p>.<p>‘ಚುನಾವಣೆ ಸಂಬಂಧ ಕನಿಷ್ಠ ಒಂದು ವಾರ ಮುಂಚಿತವಾಗಿ ಪ್ರಕಟಣೆ ನೀಡಬೇಕು. ಆದರೆ, ತಾಲ್ಲೂಕಿನಲ್ಲಿ ಚುನಾವಣಾಧಿಕಾರಿ ಯಾರು, ಚುನಾವಣೆ ಸ್ಥಳ ಯಾವುದು ಎಂಬುದನ್ನು ಗುಟ್ಟಾಗಿ ಇಡಲಾಗಿದೆ. ಇದು ಪ್ರಜಾಪ್ರಭುತ್ವದ ಮೂಲತತ್ವಗಳಿಗೆ ವಿರುದ್ಧವಾಗಿದೆ’ ಎಂದು ಆರೋಪಿಸಿದರು.</p>.<p>ಶಿಕ್ಷಕ ಮಹಾಂತೇಶ್ ಬಿರಾದಾರ ಮಾತನಾಡಿ,‘ಹಿಂದೆ ನನ್ನ ನೇತೃತ್ವದಲ್ಲಿ ಅಧಿಕಾರ ಅನುಭವಿಸಿದವರೇ ಈಗ ನನ್ನ ಹೆಸರನ್ನು ಕೈಬಿಟ್ಟು ನಂಬಿಕೆ ದ್ರೋಹ ಮಾಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಈ ಸಂಬಂಧ ಈಗಾಗಲೇ ನ್ಯಾಯಾಲಯದ ಮೊರೆ ಹೋಗಿದ್ದು, ದಾಖಲೆಗಳೊಂದಿಗೆ ಮತ್ತೊಮ್ಮೆ ಹಾಜರಾಗುತ್ತೇವೆ. ನ್ಯಾಯ ಸಿಗುವ ವಿಶ್ವಾಸವಿದೆ. ನಾನು ಇರದಿದ್ದರೂ 10 ಸಾಮಾನ್ಯ ಹಾಗೂ 5 ಮಹಿಳಾ ಅಭ್ಯರ್ಥಿಗಳೊಂದಿಗೆ ಹಿರಿಯರಾದ ನಂದೀಶ್ ಅವರ ನೇತೃತ್ವದಲ್ಲಿ ಮತ್ತೆ ಚುನಾವಣೆಗೆ ಬರುತ್ತೇವೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-32-1472511582</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>