<p>ರಾಯಚೂರು: ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕೆಲಸ ಅತ್ಯಂತ ಮಹತ್ವದ್ದಾಗಿದೆ ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಹೇಳಿದರು.</p>.<p>ತಾಲ್ಲೂಕಿನ ಯರಗೇರಾದಲ್ಲಿ ಸ್ಥಾಪಿತವಾದ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು ಸಂಯೋಜಿತ) ಆರ್ಡಿಎಸ್ ಗಿಲ್ಲೆಸೂಗೂರು ಉಪವಿಭಾಗ ಸಮಿತಿಯ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತುಂಗಭದ್ರಾ ಕಾರ್ಮಿಕರ ಶ್ರಮದಿಂದಲೇ ಸಾವಿರಾರು ರೈತರ ಜಮೀನಿಗೆ ನೀರು ತಲುಪುತ್ತಿದೆ. ತುಂಗಭದ್ರಾ ಜಲಾಶಯದ ಪ್ರಮುಖ ಉದ್ದೇಶವೇ ರೈತರ ಕೃಷಿ ಭೂಮಿಗೆ ಸಮರ್ಪಕವಾಗಿ ನೀರು ಹರಿಸುವುದಾಗಿದೆ ಎಂದು ತಿಳಿಸಿದರು.</p>.<p>ಕಾರ್ಮಿಕರು ನೀರಾವರಿ ವ್ಯವಸ್ಥೆಯ ಬೆನ್ನೆಲುಬಾಗಿದ್ದು, ಅವರ ಹಕ್ಕುಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟಿತ ಹೋರಾಟ ಅಗತ್ಯ ಎಂದರು.</p>.<p>ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ ಮಾತನಾಡಿ,‘ ತುಂಗಭದ್ರಾ ನೀರಾವರಿ ಕಾರ್ಮಿಕರ ಹೋರಾಟ ಸರ್ಕಾರ ಹಾಗೂ ಕಾನೂನು ಹೋರಾಟದ ಮೂಲಕ ಮುಂದುವರಿದಿದೆ’ ಎಂದು ಹೇಳಿದರು.</p>.<p>ಇತ್ತೀಚಿಗೆ ಹತ್ತಕ್ಕೂ ಹೆಚ್ಚು ಕಾರ್ಮಿಕರ ಪರವಾಗಿ ಕಾರ್ಮಿಕ ನ್ಯಾಯಾಲಯದಿಂದ ಆದೇಶಗಳನ್ನು ಪಡೆಯಲಾಗಿದೆ. ತುಂಗಭದ್ರಾ ನೀರಾವರಿ ಕಾರ್ಮಿಕರನ್ನು ಕಾಯಂ ಕೆಲಸಗಾರರೆಂದು ಪರಿಗಣಿಸುವಂತೆ ಕೋರಿ ಕಾರ್ಮಿಕ ನ್ಯಾಯಾಲಯದ ಮೊರೆ ಹೋಗಲಾಗಿದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ ಎಂದು ಅವರು ತಿಳಿಸಿದರು.</p>.<p>ಕಾರ್ಮಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ರೈತರ ಜಮೀನಿಗೆ ನೀರು ಹರಿಸುವ ಕೆಲಸವನ್ನು ಜವಾಬ್ದಾರಿಯಿಂದ ನಿರಂತರವಾಗಿ ನಿರ್ವಹಿಸಬೇಕು ಎಂದರು.</p>.<p>ನಾಗರಾಜ ಪೂಜಾರ್, ಸಂಘದ ಪದಾಧಿಕಾರಿಗಳಾದ ಎಂ.ಬಸವರಾಜ, ಅಜೀಜ್ ಜಾಗೀರದಾರ್, ಭೀಮಯ್ಯ ಉಡುಂಗಲ್, ನಿಸಾರ್ ಅಹಮದ್, ಜಗದೀಶ್, ಈರಣ್ಣ ಅನ್ವರ್, ಜಿಲಾನಿ ಪಾಷಾ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-32-107558577</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕೆಲಸ ಅತ್ಯಂತ ಮಹತ್ವದ್ದಾಗಿದೆ ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಹೇಳಿದರು.</p>.<p>ತಾಲ್ಲೂಕಿನ ಯರಗೇರಾದಲ್ಲಿ ಸ್ಥಾಪಿತವಾದ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು ಸಂಯೋಜಿತ) ಆರ್ಡಿಎಸ್ ಗಿಲ್ಲೆಸೂಗೂರು ಉಪವಿಭಾಗ ಸಮಿತಿಯ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ತುಂಗಭದ್ರಾ ಕಾರ್ಮಿಕರ ಶ್ರಮದಿಂದಲೇ ಸಾವಿರಾರು ರೈತರ ಜಮೀನಿಗೆ ನೀರು ತಲುಪುತ್ತಿದೆ. ತುಂಗಭದ್ರಾ ಜಲಾಶಯದ ಪ್ರಮುಖ ಉದ್ದೇಶವೇ ರೈತರ ಕೃಷಿ ಭೂಮಿಗೆ ಸಮರ್ಪಕವಾಗಿ ನೀರು ಹರಿಸುವುದಾಗಿದೆ ಎಂದು ತಿಳಿಸಿದರು.</p>.<p>ಕಾರ್ಮಿಕರು ನೀರಾವರಿ ವ್ಯವಸ್ಥೆಯ ಬೆನ್ನೆಲುಬಾಗಿದ್ದು, ಅವರ ಹಕ್ಕುಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟಿತ ಹೋರಾಟ ಅಗತ್ಯ ಎಂದರು.</p>.<p>ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ ಮಾತನಾಡಿ,‘ ತುಂಗಭದ್ರಾ ನೀರಾವರಿ ಕಾರ್ಮಿಕರ ಹೋರಾಟ ಸರ್ಕಾರ ಹಾಗೂ ಕಾನೂನು ಹೋರಾಟದ ಮೂಲಕ ಮುಂದುವರಿದಿದೆ’ ಎಂದು ಹೇಳಿದರು.</p>.<p>ಇತ್ತೀಚಿಗೆ ಹತ್ತಕ್ಕೂ ಹೆಚ್ಚು ಕಾರ್ಮಿಕರ ಪರವಾಗಿ ಕಾರ್ಮಿಕ ನ್ಯಾಯಾಲಯದಿಂದ ಆದೇಶಗಳನ್ನು ಪಡೆಯಲಾಗಿದೆ. ತುಂಗಭದ್ರಾ ನೀರಾವರಿ ಕಾರ್ಮಿಕರನ್ನು ಕಾಯಂ ಕೆಲಸಗಾರರೆಂದು ಪರಿಗಣಿಸುವಂತೆ ಕೋರಿ ಕಾರ್ಮಿಕ ನ್ಯಾಯಾಲಯದ ಮೊರೆ ಹೋಗಲಾಗಿದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ ಎಂದು ಅವರು ತಿಳಿಸಿದರು.</p>.<p>ಕಾರ್ಮಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ರೈತರ ಜಮೀನಿಗೆ ನೀರು ಹರಿಸುವ ಕೆಲಸವನ್ನು ಜವಾಬ್ದಾರಿಯಿಂದ ನಿರಂತರವಾಗಿ ನಿರ್ವಹಿಸಬೇಕು ಎಂದರು.</p>.<p>ನಾಗರಾಜ ಪೂಜಾರ್, ಸಂಘದ ಪದಾಧಿಕಾರಿಗಳಾದ ಎಂ.ಬಸವರಾಜ, ಅಜೀಜ್ ಜಾಗೀರದಾರ್, ಭೀಮಯ್ಯ ಉಡುಂಗಲ್, ನಿಸಾರ್ ಅಹಮದ್, ಜಗದೀಶ್, ಈರಣ್ಣ ಅನ್ವರ್, ಜಿಲಾನಿ ಪಾಷಾ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-32-107558577</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>