<p><strong>ಕವಿತಾಳ:</strong> ಸಮೀಪದ ಪಾಮನಕಲ್ಲೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಅಪೂರ್ಣವಾಗಿರುವುದು ಮತ್ತು ಸತತ ಮಳೆಯಿಂದ ಓಣಿಗಳಲ್ಲಿ ರಸ್ತೆಗಳು ಹದಗೆಟ್ಟಿವೆ.</p>.<p>ರಸ್ತೆಯಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಕಾಡುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದರು.</p>.<p>ಗ್ರಾಮದ ಜನತಾ ಕಾಲೊನಿಯಲ್ಲಿ ಜೆಜೆಎಂ ಕಾಮಗಾರಿ ಹಿನ್ನೆಲೆಯಲ್ಲಿ ಪೈಪ್ ಅಳವಡಿಸಲು ತೆಗೆದ ಜಾಗದಲ್ಲಿ ಮಣ್ಣು ತುಂಬಲಾಗಿದೆ. ಮೇಲೆ ಕಾಂಕ್ರೀಟ್ ಹಾಕದ ಕಾರಣ ತಗ್ಗಿನಲ್ಲಿ ನೀರು ನಿಂತು ಗಲೀಜು ಸೃಷ್ಟಿಯಾಗಿದೆ.</p>.<p>ಶಾಲಾ ಪಕ್ಕದಲ್ಲಿಯೇ ರಸ್ತೆ ಹಾದು ಹೋಗಿದೆ ಈ ರಸ್ತೆಯಲ್ಲಿ ಓಡಾಡುವ ಶಾಲಾ ಮಕ್ಕಳು ಹಾಗೂ ಓಣಿಯ ನಿವಾಸಿಗಳು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.</p>.<p>‘ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಸ್ತೆ ಹದಗೆಟ್ಟ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ ಅವರಿಗೂ ಮಾಹಿತಿ ನೀಡಲಾಗಿದೆ. ಆದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ’ ಎಂದು ಕರವೇ ಮುಖಂಡ ಲಕ್ಷ್ಮಣ ಚೌಡ್ಲಿ ಆರೋಪಿಸಿದರು.</p>.<div><blockquote>ಈ ಬಗ್ಗೆ ಜೆಜೆಎಂ ಎಂಜಿನಿಯರ್ಗೆ ಮಾಹಿತಿ ನೀಡಲಾಗಿದೆ. ರಸ್ತೆ ತಾತ್ಕಾಲಿಕ ಮತ್ತು ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಅಮರೇಶ ಯಾದವ ತಾ.ಪಂ ಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಸಮೀಪದ ಪಾಮನಕಲ್ಲೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಅಪೂರ್ಣವಾಗಿರುವುದು ಮತ್ತು ಸತತ ಮಳೆಯಿಂದ ಓಣಿಗಳಲ್ಲಿ ರಸ್ತೆಗಳು ಹದಗೆಟ್ಟಿವೆ.</p>.<p>ರಸ್ತೆಯಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಕಾಡುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದರು.</p>.<p>ಗ್ರಾಮದ ಜನತಾ ಕಾಲೊನಿಯಲ್ಲಿ ಜೆಜೆಎಂ ಕಾಮಗಾರಿ ಹಿನ್ನೆಲೆಯಲ್ಲಿ ಪೈಪ್ ಅಳವಡಿಸಲು ತೆಗೆದ ಜಾಗದಲ್ಲಿ ಮಣ್ಣು ತುಂಬಲಾಗಿದೆ. ಮೇಲೆ ಕಾಂಕ್ರೀಟ್ ಹಾಕದ ಕಾರಣ ತಗ್ಗಿನಲ್ಲಿ ನೀರು ನಿಂತು ಗಲೀಜು ಸೃಷ್ಟಿಯಾಗಿದೆ.</p>.<p>ಶಾಲಾ ಪಕ್ಕದಲ್ಲಿಯೇ ರಸ್ತೆ ಹಾದು ಹೋಗಿದೆ ಈ ರಸ್ತೆಯಲ್ಲಿ ಓಡಾಡುವ ಶಾಲಾ ಮಕ್ಕಳು ಹಾಗೂ ಓಣಿಯ ನಿವಾಸಿಗಳು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.</p>.<p>‘ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಸ್ತೆ ಹದಗೆಟ್ಟ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ ಅವರಿಗೂ ಮಾಹಿತಿ ನೀಡಲಾಗಿದೆ. ಆದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ’ ಎಂದು ಕರವೇ ಮುಖಂಡ ಲಕ್ಷ್ಮಣ ಚೌಡ್ಲಿ ಆರೋಪಿಸಿದರು.</p>.<div><blockquote>ಈ ಬಗ್ಗೆ ಜೆಜೆಎಂ ಎಂಜಿನಿಯರ್ಗೆ ಮಾಹಿತಿ ನೀಡಲಾಗಿದೆ. ರಸ್ತೆ ತಾತ್ಕಾಲಿಕ ಮತ್ತು ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಅಮರೇಶ ಯಾದವ ತಾ.ಪಂ ಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>