<p><strong>ರಾಯಚೂರು</strong>: ರಾಯಚೂರು ವಿಶ್ವವಿದ್ಯಾಲಯಕ್ಕೆ ತುರ್ತಾಗಿ ಅಗತ್ಯವಿರುವ ಬೋಧಕೇತರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಅನುಮತಿ ಕೋರಲಾಗಿದ್ದು, ಸರ್ಕಾರದಿಂದ ಪರಿಶೀಲಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಸಿ.ಎನ್. ಹೇಳಿದ್ದಾರೆ.</p>.<p>ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಅವರು ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಚಿವರು ಲಿಖಿತ ಉತ್ತರ ಒದಗಿಸಿದ್ದಾರೆ. ರಾಯಚೂರು ವಿಶ್ವವಿದ್ಯಾಲಯಕ್ಕೆ ಇದುವರೆಗೂ ಯಾವುದೇ ಬೋಧಕೇತರ ಹುದ್ದೆಗಳನ್ನು ಮತ್ತು ಮೂಲಸೌಕರ್ಯಗಳ ವ್ಯವಸ್ಥೆ ಇಲ್ಲದಿರುವುದು ವಿದ್ಯಾರ್ಥಿಗಳ ತೊಂದರೆಗೆ ಕಾರಣವಾಗಿದೆ. ಈ ಕುರಿತು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂಬುದಾಗಿ ಶಾಸಕರು ಪ್ರಶ್ನಿಸಿದ್ದರು.</p>.<p>ನೂತನ ವಿಶ್ವವಿದ್ಯಾಲಯವು 2020 ಆಗಸ್ಟ್ 1ರಿಂದ ಅಸ್ತಿತ್ವಕ್ಕೆ ಬಂದಿದ್ದು, ಪ್ರಸ್ತುತ ಯರಗೇರಾದಲ್ಲಿ 250 ಎಕರೆ ಜಮೀನನ್ನು ನೀಡಲಾಗಿದೆ. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಹೊರಗುತ್ತಿಗೆ ಅಧಾರದಲ್ಲಿ ನೇಮಕವಾದ 26 ಬೋಧಕೇತರ ಸಿಬ್ಬಂದಿಯು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2019 ರ ಮಾರ್ಚ್ನಲ್ಲಿ ₹2.2 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. 2021–22 ಆರ್ಥಿಕ ಸಾಲಿನಲ್ಲಿ ₹50 ಲಕ್ಷ ಮಂಜೂರಾಗಿದ್ದು, ಈಗಾಗಲೇ ₹12.5 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 2021 ರ ಜುಲೈನಲ್ಲಿ 50 ಲಕ್ಷ ಬಿಡುಗಡೆ ಮಾಡಲಾಗಿದೆ. ₹30 ಕೋಟಿ ಅನುದಾನ ಕೋರಿ ವಿಶ್ವವಿದ್ಯಾಲಯದಿಂದ ಪ್ರಸ್ತಾವನೆ ಸಲ್ಲಿಸಿರುವುದು ಕೂಡಾ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವರು ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ರಾಯಚೂರು ವಿಶ್ವವಿದ್ಯಾಲಯಕ್ಕೆ ತುರ್ತಾಗಿ ಅಗತ್ಯವಿರುವ ಬೋಧಕೇತರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಅನುಮತಿ ಕೋರಲಾಗಿದ್ದು, ಸರ್ಕಾರದಿಂದ ಪರಿಶೀಲಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಸಿ.ಎನ್. ಹೇಳಿದ್ದಾರೆ.</p>.<p>ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಅವರು ವಿಧಾನಮಂಡಲ ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಸಚಿವರು ಲಿಖಿತ ಉತ್ತರ ಒದಗಿಸಿದ್ದಾರೆ. ರಾಯಚೂರು ವಿಶ್ವವಿದ್ಯಾಲಯಕ್ಕೆ ಇದುವರೆಗೂ ಯಾವುದೇ ಬೋಧಕೇತರ ಹುದ್ದೆಗಳನ್ನು ಮತ್ತು ಮೂಲಸೌಕರ್ಯಗಳ ವ್ಯವಸ್ಥೆ ಇಲ್ಲದಿರುವುದು ವಿದ್ಯಾರ್ಥಿಗಳ ತೊಂದರೆಗೆ ಕಾರಣವಾಗಿದೆ. ಈ ಕುರಿತು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂಬುದಾಗಿ ಶಾಸಕರು ಪ್ರಶ್ನಿಸಿದ್ದರು.</p>.<p>ನೂತನ ವಿಶ್ವವಿದ್ಯಾಲಯವು 2020 ಆಗಸ್ಟ್ 1ರಿಂದ ಅಸ್ತಿತ್ವಕ್ಕೆ ಬಂದಿದ್ದು, ಪ್ರಸ್ತುತ ಯರಗೇರಾದಲ್ಲಿ 250 ಎಕರೆ ಜಮೀನನ್ನು ನೀಡಲಾಗಿದೆ. ಗುಲಬರ್ಗಾ ವಿಶ್ವವಿದ್ಯಾಲಯದಿಂದ ಹೊರಗುತ್ತಿಗೆ ಅಧಾರದಲ್ಲಿ ನೇಮಕವಾದ 26 ಬೋಧಕೇತರ ಸಿಬ್ಬಂದಿಯು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2019 ರ ಮಾರ್ಚ್ನಲ್ಲಿ ₹2.2 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. 2021–22 ಆರ್ಥಿಕ ಸಾಲಿನಲ್ಲಿ ₹50 ಲಕ್ಷ ಮಂಜೂರಾಗಿದ್ದು, ಈಗಾಗಲೇ ₹12.5 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ 2021 ರ ಜುಲೈನಲ್ಲಿ 50 ಲಕ್ಷ ಬಿಡುಗಡೆ ಮಾಡಲಾಗಿದೆ. ₹30 ಕೋಟಿ ಅನುದಾನ ಕೋರಿ ವಿಶ್ವವಿದ್ಯಾಲಯದಿಂದ ಪ್ರಸ್ತಾವನೆ ಸಲ್ಲಿಸಿರುವುದು ಕೂಡಾ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಸಚಿವರು ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>