ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಧ್ಯೇಯ ಇಟ್ಟುಕೊಂಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ)ಯು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ವಹಿಸಿದೆ. ಆದರೆ, ರಾಯಚೂರು ವಿಶ್ವವಿದ್ಯಾಲಯ ಮತ್ತು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಿಂದ ಸಲ್ಲಿಕೆಯಾಗಿರುವ ಬೇಡಿಕೆಗಳಿಗೆ ಮನ್ನಣೆಯನ್ನೇ ಕೊಡುತ್ತಿಲ್ಲ. ಕೆಕೆಆರ್ಡಿಬಿ ಕೂಡಾ ರಾಜಕಾರಣದ ಕಪಿಮುಷ್ಟಿಗೆ ಸಿಲುಕಿದೆ ಎಂಬುದು ಶಿಕ್ಷಣ ಪ್ರೇಮಿಗಳ ಆರೋಪ.