ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸಂಪುಟದಲ್ಲಿ ಈಚೆಗೆ ಕೈಗೊಂಡಿದ್ದ ನಿರ್ಧಾರದಂತೆ ಸರ್ಕಾರವು ಸುಗ್ರೀವಾಜ್ಞೆ ಹೊರಡಿಸಿತ್ತು. ಆದರೆ, ವಿಶ್ವವಿದ್ಯಾಲಯ ಸ್ಥಾಪನೆಯ ಜರೂರತ್ತು ಏನಿದೆ ಎಂದು ರಾಜ್ಯಪಾಲರು ಪ್ರಶ್ನೆ ಹಾಕಿ, ಕಡತ ವಾಪಸ್ ಕಳುಹಿಸಿದ್ದಾರೆ. ಈ ಬಗ್ಗೆ ಉತ್ತರ ಸಿದ್ಧಪಡಿಸುವಂತೆ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆ’ ಎಂದರು.