<p><strong>ರಾಯಚೂರು:</strong> ‘ಈ ಮೊದಲು ನಿರ್ಧರಿಸಿದ್ದ ರಾಯಚೂರು ಜಿಲ್ಲಾ ಉತ್ಸವದ ಎಲ್ಲ ಕಾರ್ಯಕ್ರಮಗಳು ಫೆಬ್ರುವರಿ 5, 6 ಮತ್ತು 7ರವರೆಗೆ ನಿರಂತರವಾಗಿ ನಡೆಯುವಂತೆ ಕಾರ್ಯ ಯೋಜನೆ ರೂಪಿಸಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ರಾಯಚೂರು ಉತ್ಸವ ಆಚರಣಾ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮತ್ತೊಂದು ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಈಗಾಗಲೇ ಬೇರೆ ಬೇರೆ ದಿನಾಂಕಗಳಂದು ನಿಗದಿಯಾದ ಕಾರ್ಯಕ್ರಮಗಳನ್ನು ಯಥಾ ರೀತಿಯಲ್ಲಿ ನಡೆಸಬೇಕು’ ಎಂದರು.</p>.<p>‘ಉತ್ಸವದ ಸಿದ್ಧತೆಗೆ ಇದೀಗ ಸ್ವಲ್ಪ ದಿನಗಳ ಕಾಲಾವಕಾಶ ಲಭಿಸಿದೆ. ಕೆಲವು ಸ್ಪರ್ಧೆಗಳಲ್ಲಿ ಮಾತ್ರ ಮಾರ್ಪಾಡುಗಳಾಗಲಿವೆ. ಇನ್ನುಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ವಿರಮಿಸದೇ ನಿರಂತರವಾಗಿ ಉತ್ಸವದ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗಬೇಕು’ ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಈ ಮೊದಲು ನಿರ್ಧರಿಸಿದ್ದ ರಾಯಚೂರು ಜಿಲ್ಲಾ ಉತ್ಸವದ ಎಲ್ಲ ಕಾರ್ಯಕ್ರಮಗಳು ಫೆಬ್ರುವರಿ 5, 6 ಮತ್ತು 7ರವರೆಗೆ ನಿರಂತರವಾಗಿ ನಡೆಯುವಂತೆ ಕಾರ್ಯ ಯೋಜನೆ ರೂಪಿಸಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ರಾಯಚೂರು ಉತ್ಸವ ಆಚರಣಾ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ನಿತೀಶ್ ಕೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮತ್ತೊಂದು ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಈಗಾಗಲೇ ಬೇರೆ ಬೇರೆ ದಿನಾಂಕಗಳಂದು ನಿಗದಿಯಾದ ಕಾರ್ಯಕ್ರಮಗಳನ್ನು ಯಥಾ ರೀತಿಯಲ್ಲಿ ನಡೆಸಬೇಕು’ ಎಂದರು.</p>.<p>‘ಉತ್ಸವದ ಸಿದ್ಧತೆಗೆ ಇದೀಗ ಸ್ವಲ್ಪ ದಿನಗಳ ಕಾಲಾವಕಾಶ ಲಭಿಸಿದೆ. ಕೆಲವು ಸ್ಪರ್ಧೆಗಳಲ್ಲಿ ಮಾತ್ರ ಮಾರ್ಪಾಡುಗಳಾಗಲಿವೆ. ಇನ್ನುಳಿದಂತೆ ಯಾವುದೇ ಬದಲಾವಣೆಗಳು ಇರುವುದಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ವಿರಮಿಸದೇ ನಿರಂತರವಾಗಿ ಉತ್ಸವದ ಕಾರ್ಯಚಟುವಟಿಕೆಗಳಲ್ಲಿ ಭಾಗಿಯಾಗಬೇಕು’ ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>