<p><strong>ರಾಯಚೂರು</strong>: ಬೇಸಿಗೆ ಕಾರಣ ಎಲ್ಲ ಬಗೆಯ ಸೊಪ್ಪುಗಳ ಬೆಲೆ ದುಬಾರಿಯಾಗಿದೆ. ₹20ಕ್ಕೆ ಎರಡು ಅಥವಾ ಮೂರು ಕಟ್ಟು ಸೊಪ್ಪು ಮಾರಾಟವಾಗುತ್ತಿದೆ. ಪ್ರಮುಖ ತರಕಾರಿ ಬೆಲೆಯಲ್ಲೂ ತುಸು ಹೆಚ್ಚಳವಾಗಿದೆ.</p>.<p>ಹಸಿ ಶುಂಠಿ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕ್ವಿಂಟಲ್ಗೆ ಈರುಳ್ಳಿ ₹500, ಹೂಕೋಸು, ಟೊಮೆಟೊ ₹1 ಸಾವಿರ, ಗಜ್ಜರಿ ₹2 ಸಾವಿರ ಹೆಚ್ಚಾಗಿದೆ. ಬೆಳ್ಳುಳ್ಳಿ, ಆಲೂಗಡ್ಡೆ, ಎಲೆಕೋಸು, ಬೀಟ್ರೂಟ್, ಬೀನ್ಸ್, ಬೆಂಡೆಕಾಯಿ, ತುಪ್ಪದ ಹಿರೇಕಾಯಿ, ಚವಳೆಕಾಯಿ, ಸೌತೆಕಾಯಿ ಬೆಲೆ ಸ್ಥಿರವಾಗಿದೆ.</p>.<p>ಬದನೆಕಾಯಿ, ಡೊಣ ಮೆಣಸಿನ ಕಾಯಿ, ಹಿರೇಕಾಯಿ, ತೊಂಡೆಕಾಯಿ, ಹಸಿ ಮೆಣಸಿನಕಾಯಿ ಬೆಲೆ ಕಡಿಮೆ ಯಾಗಿದೆ. ಕೊಂಬಿನ ತರಕಾರಿ ಬೆಲೆ ಹೆಚ್ಚಿಸಿಕೊಳ್ಳದೇ ಗ್ರಾಹಕರ ಹಿತ ಕಾಯ್ದಿವೆ.</p>.<p>ಮಹಾರಾಷ್ಟ್ರದ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬಂದಿದೆ. ರಾಯಚೂರು ತಾಲ್ಲೂಕಿನ ಗಡಿ ಗ್ರಾಮಗಳು, ಆಂಧ್ರಪ್ರದೇಶ, ತೆಲಂಗಾಣ ಗಡಿ ಗ್ರಾಮಗಳಿಂದ ಟೊಮೆಟೊ, ಎಲೆಕೋಸು, ಹೂಕೋಸು, ಬದನೆಕಾಯಿ, ಸೌತೆಕಾಯಿ ಸೇರಿದಂತೆ ಕೆಲ ಕಾಯಿಪಲ್ಲೆ ನಗರದ ತರಕಾರಿ ಸಗಟು ಮಾರುಕಟ್ಟೆಗೆ ಬಂದಿದೆ.</p>.<p>‘ಬೇಸಿಗೆ ಕಾರಣ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತಾಜಾ ತರಕಾರಿ ಬಂದಿದೆ. ಹೀಗಾಗಿ ಸಹಜವಾಗಿ ಬೆಲೆ ಏರಿದೆ. ಒಂದು ತಿಂಗಳು ತರಕಾರಿ ಬೆಲೆ ದುಬಾರಿಯಾಗಿದ್ದರೂ ಅಚ್ಚರಿ ಇಲ್ಲ’ ಎಂದು ತರಕಾರಿ ವ್ಯಾಪಾರಿ ಸುನೀಲಕುಮಾರ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಬೇಸಿಗೆ ಕಾರಣ ಎಲ್ಲ ಬಗೆಯ ಸೊಪ್ಪುಗಳ ಬೆಲೆ ದುಬಾರಿಯಾಗಿದೆ. ₹20ಕ್ಕೆ ಎರಡು ಅಥವಾ ಮೂರು ಕಟ್ಟು ಸೊಪ್ಪು ಮಾರಾಟವಾಗುತ್ತಿದೆ. ಪ್ರಮುಖ ತರಕಾರಿ ಬೆಲೆಯಲ್ಲೂ ತುಸು ಹೆಚ್ಚಳವಾಗಿದೆ.</p>.<p>ಹಸಿ ಶುಂಠಿ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕ್ವಿಂಟಲ್ಗೆ ಈರುಳ್ಳಿ ₹500, ಹೂಕೋಸು, ಟೊಮೆಟೊ ₹1 ಸಾವಿರ, ಗಜ್ಜರಿ ₹2 ಸಾವಿರ ಹೆಚ್ಚಾಗಿದೆ. ಬೆಳ್ಳುಳ್ಳಿ, ಆಲೂಗಡ್ಡೆ, ಎಲೆಕೋಸು, ಬೀಟ್ರೂಟ್, ಬೀನ್ಸ್, ಬೆಂಡೆಕಾಯಿ, ತುಪ್ಪದ ಹಿರೇಕಾಯಿ, ಚವಳೆಕಾಯಿ, ಸೌತೆಕಾಯಿ ಬೆಲೆ ಸ್ಥಿರವಾಗಿದೆ.</p>.<p>ಬದನೆಕಾಯಿ, ಡೊಣ ಮೆಣಸಿನ ಕಾಯಿ, ಹಿರೇಕಾಯಿ, ತೊಂಡೆಕಾಯಿ, ಹಸಿ ಮೆಣಸಿನಕಾಯಿ ಬೆಲೆ ಕಡಿಮೆ ಯಾಗಿದೆ. ಕೊಂಬಿನ ತರಕಾರಿ ಬೆಲೆ ಹೆಚ್ಚಿಸಿಕೊಳ್ಳದೇ ಗ್ರಾಹಕರ ಹಿತ ಕಾಯ್ದಿವೆ.</p>.<p>ಮಹಾರಾಷ್ಟ್ರದ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬಂದಿದೆ. ರಾಯಚೂರು ತಾಲ್ಲೂಕಿನ ಗಡಿ ಗ್ರಾಮಗಳು, ಆಂಧ್ರಪ್ರದೇಶ, ತೆಲಂಗಾಣ ಗಡಿ ಗ್ರಾಮಗಳಿಂದ ಟೊಮೆಟೊ, ಎಲೆಕೋಸು, ಹೂಕೋಸು, ಬದನೆಕಾಯಿ, ಸೌತೆಕಾಯಿ ಸೇರಿದಂತೆ ಕೆಲ ಕಾಯಿಪಲ್ಲೆ ನಗರದ ತರಕಾರಿ ಸಗಟು ಮಾರುಕಟ್ಟೆಗೆ ಬಂದಿದೆ.</p>.<p>‘ಬೇಸಿಗೆ ಕಾರಣ ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ತಾಜಾ ತರಕಾರಿ ಬಂದಿದೆ. ಹೀಗಾಗಿ ಸಹಜವಾಗಿ ಬೆಲೆ ಏರಿದೆ. ಒಂದು ತಿಂಗಳು ತರಕಾರಿ ಬೆಲೆ ದುಬಾರಿಯಾಗಿದ್ದರೂ ಅಚ್ಚರಿ ಇಲ್ಲ’ ಎಂದು ತರಕಾರಿ ವ್ಯಾಪಾರಿ ಸುನೀಲಕುಮಾರ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>