<p>ಮುದಗಲ್: ಸಮೀಪದ ವ್ಯಾಕರನಾಳ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಡಾ.ಬಾಬು ಜಗಜೀವನರಾಂ ಅವರ 119ನೇ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಹಾಗೂ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಸೋಮನಗೌಡ ಪೊಲೀಸ್ ಪಾಟೀಲ ವ್ಯಾಕರನಾಳ ಉದ್ಘಾಟಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಬಿ.ಮುರಾರಿ ಮಸ್ಕಿ ಮಾತನಾಡಿ,‘ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಮತ್ತು ಅವರ ಹಾದಿ ಇಂದಿನ ಸಮಾಜಕ್ಕೆ ಅತ್ಯಗತ್ಯ. ಇವರು ಸಾಮಾಜಿಕ ಸಮಾನತೆ ಮತ್ತು ನ್ಯಾಯದ ಸಂಕೇತವಾಗಿದ್ದಾರೆ’ ಎಂದರು.</p>.<p>ತಾಲ್ಲೂಕು ಸಂಚಾಲಕ ಶರಣಪ್ಪ ಕಟ್ಟಿಮನಿ ಮಾತನಾಡಿ,‘ಅಂಬೇಡ್ಕರ್ ಅವರು ಅಂಧಕಾರ ಹೋಗಲಾಡಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಜನರಲ್ಲಿ ಮನೆ ಮಾಡಿರುವ ಮೌಢ್ಯದ ವಿರುದ್ಧ ಹೋರಾಟ ಮಾಡಿದರು. ಸಂವಿಧಾನ ರಚನೆ ಮಾಡಿ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸಿದ್ದಾರೆ’ ಎಂದು ಹೇಳಿದರು.</p>.<p>ನಿರುಪಾದೇಶ್ವರ ಅಂಕಲಗಿ ಮಠದ ಫಕೀರೇಶ್ವರ ಸ್ವಾಮೀಜಿ ಹಾಗೂ ವ್ಯಾಕರನಾಳ ಗ್ರಾಮದ ವೀರಯ್ಯ ಸ್ವಾಮಿ ಆಶೀರ್ವಚನ ನೀಡಿದರು.</p>.<p>ಜಿಲ್ಲಾ ಸಂಚಾಲಕ ಹನುಮಂತಪ್ಪ ವೆಂಕಟಾಪುರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿದ್ದರಾಮೇಶ್ವರ ಗೌಡ ಹಾಗೂ ಟಿ.ಪಿ.ಶರಣಪ್ಪ ನಾಗಲಾಪುರ ಮಾತನಾಡಿದರು.</p>.<p>ಮಸ್ಕಿ ತಾಲ್ಲೂಕು ಸಂಚಾಲಕ ಮೌನೇಶ ಸುಲ್ತಾನಪುರ, ಲಕ್ಕಪ್ಪ ನಾಗರಾಳ, ನಾಗರಾಜು ಎರಡೋಣ, ಸಂಚಾಲಕ ಬಸವರಾಜ ಬಂಕದ ಮನಿ, ಸಂಗಪ್ಪ ಹಿರೇಮನಿ, ವೀರೇಶ, ಕರಿಯಪ್ಪ, ದ್ಯಾಮಣ್ಣ, ಶಂಕ್ರಪ್ಪ ವ್ಯಾಕರನಾಳ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-32-1871481762</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುದಗಲ್: ಸಮೀಪದ ವ್ಯಾಕರನಾಳ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.</p>.<p>ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಡಾ.ಬಾಬು ಜಗಜೀವನರಾಂ ಅವರ 119ನೇ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಹಾಗೂ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಸೋಮನಗೌಡ ಪೊಲೀಸ್ ಪಾಟೀಲ ವ್ಯಾಕರನಾಳ ಉದ್ಘಾಟಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಬಿ.ಮುರಾರಿ ಮಸ್ಕಿ ಮಾತನಾಡಿ,‘ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಮತ್ತು ಅವರ ಹಾದಿ ಇಂದಿನ ಸಮಾಜಕ್ಕೆ ಅತ್ಯಗತ್ಯ. ಇವರು ಸಾಮಾಜಿಕ ಸಮಾನತೆ ಮತ್ತು ನ್ಯಾಯದ ಸಂಕೇತವಾಗಿದ್ದಾರೆ’ ಎಂದರು.</p>.<p>ತಾಲ್ಲೂಕು ಸಂಚಾಲಕ ಶರಣಪ್ಪ ಕಟ್ಟಿಮನಿ ಮಾತನಾಡಿ,‘ಅಂಬೇಡ್ಕರ್ ಅವರು ಅಂಧಕಾರ ಹೋಗಲಾಡಿಸಿದರು. ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಜನರಲ್ಲಿ ಮನೆ ಮಾಡಿರುವ ಮೌಢ್ಯದ ವಿರುದ್ಧ ಹೋರಾಟ ಮಾಡಿದರು. ಸಂವಿಧಾನ ರಚನೆ ಮಾಡಿ ಪ್ರತಿಯೊಬ್ಬರಿಗೂ ಅನುಕೂಲ ಕಲ್ಪಿಸಿದ್ದಾರೆ’ ಎಂದು ಹೇಳಿದರು.</p>.<p>ನಿರುಪಾದೇಶ್ವರ ಅಂಕಲಗಿ ಮಠದ ಫಕೀರೇಶ್ವರ ಸ್ವಾಮೀಜಿ ಹಾಗೂ ವ್ಯಾಕರನಾಳ ಗ್ರಾಮದ ವೀರಯ್ಯ ಸ್ವಾಮಿ ಆಶೀರ್ವಚನ ನೀಡಿದರು.</p>.<p>ಜಿಲ್ಲಾ ಸಂಚಾಲಕ ಹನುಮಂತಪ್ಪ ವೆಂಕಟಾಪುರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿದ್ದರಾಮೇಶ್ವರ ಗೌಡ ಹಾಗೂ ಟಿ.ಪಿ.ಶರಣಪ್ಪ ನಾಗಲಾಪುರ ಮಾತನಾಡಿದರು.</p>.<p>ಮಸ್ಕಿ ತಾಲ್ಲೂಕು ಸಂಚಾಲಕ ಮೌನೇಶ ಸುಲ್ತಾನಪುರ, ಲಕ್ಕಪ್ಪ ನಾಗರಾಳ, ನಾಗರಾಜು ಎರಡೋಣ, ಸಂಚಾಲಕ ಬಸವರಾಜ ಬಂಕದ ಮನಿ, ಸಂಗಪ್ಪ ಹಿರೇಮನಿ, ವೀರೇಶ, ಕರಿಯಪ್ಪ, ದ್ಯಾಮಣ್ಣ, ಶಂಕ್ರಪ್ಪ ವ್ಯಾಕರನಾಳ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-32-1871481762</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>