<p><strong>ರಾಯಚೂರು:</strong> ‘ಕುಟುಂಬದ ಸ್ವಾವಲಂಬನೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕುಟುಂಬದ ಆರ್ಥಿಕ ಸಬಲೀಕರಣ ಸ್ವಸಹಾಯ ಗುಂಪುಗಳಿಂದ ಮಾತ್ರ ಸಾಧ್ಯ’ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಸೂರ್ಯಮನಿ ಸಾಹೊ ಹೇಳಿದರು.</p>.<p>ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಜೀವನ ಮಿತ್ರ ಸಮಾಜ ಸೇವಾ ಸಂಸ್ಥೆ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಗದಲ್ಲಿಗುರುವಾರ ನಡೆದ ಬೃಹತ್ ಕೃಷಿ ಜಾಗರಣೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸಾಲ ಮೇಳದಲ್ಲಿ ಅವರು ಮಾತನಾಡಿದರು.</p>.<p>ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಅವರು 32 ಮಹಿಳಾ ಸ್ವಸಹಾಯ ಗುಂಪುಗಳ 350ಕ್ಕೂ ಅಧಿಕ ಸದಸ್ಯರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ನ ₹ 3. 20 ಕೋಟಿ ಮೊತ್ತದ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಿದರು.</p>.<p>ನಬಾರ್ಡ್ ಬ್ಯಾಂಕಿನ ಡಿಡಿಎಂ ಕಲಾವತಿ ಮಾತನಾಡಿ, ‘ಜಂಟಿ ಬಾಧ್ಯತಾ ಗುಂಪುಗಳಿಗೆ ಜೀವನ್ ಮಿತ್ರ ಸಮಾಜ ಸೇವಾ ಸಂಸ್ಥೆಯ ಮೂಲಕ ಸುಮಾರು 9000 ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗಿದೆ’ ಎಂದು ತಿಳಿಸಿದರು.</p>.<p>ಜೀವನ ಮಿತ್ರ ಸಮಾಜ ಸೇವಾ ಸಂಸ್ಥೆಯ ಕಾರ್ಯದರ್ಶಿ ನಟರಾಜ್ ಮಾತನಾಡಿ, ‘ಜೀವನ ಮಿತ್ರ ಸಮಾಜ ಸೇವಾ ಸಂಸ್ಥೆಯು 22 ವರ್ಷಗಳಿಂದ ಮಹಿಳಾ ಸ್ವಸಹಾಯ ಸಂಘಗಳ ಮತ್ತು ಜಂಟಿ ಬಾಧ್ಯತಾ ಗುಂಪುಗಳಿಗೆ ತರಬೇತಿ ಕೊಡುತ್ತ ಬರಲಾಗಿದೆ’ ಎಂದು ಹೇಳಿದರು.</p>.<p>‘ಆರು ರಾಷ್ಟ್ರೀಕೃತ ಬ್ಯಾಂಕ್ಗಳು, ಒಂದು ಆರ್ಆರ್ಬಿ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕುಗಳ ಜೊತೆ ಸ್ವಸಹಾಯ ಗುಂಪುಗಳ ನಡುವೆ ಸೇತುವೆಯಾಗಿ ನಮ್ಮ ಸಂಸ್ಥೆ ಕಾರ್ಯನಿರ್ವಹಿತ್ತಿದೆ. ಮಹಿಳೆಯರು ಮತ್ತು ರೈತರು ಉದ್ಯಮಿಗಳಾಗಲು ನಮ್ಮ ಸಂಸ್ಥೆ ಹಗಲಿರುಳು ಶ್ರಮಿಸುತ್ತಿದೆ’ ಎಂದು ತಿಳಿಸಿದರು.</p>.<p>ಹೈದರಾಬಾದ್ನ ಎಂಎಸ್ಎಂಇ ಫೌಂಡೇಶನ್ ಮುಖ್ಯಸ್ಥ ರಾಜಕುಮಾರ ಸೈಬರ್ ಅಪರಾಧಗಳ ಬಗ್ಗೆ ಮಾತನಾಡಿದರು.</p>.<p>ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣದ ಡೀನ್ ಸತೀಶಕುಮಾರ, ನಿವೃತ್ತ ರಿಸರ್ವ್ ಬ್ಯಾಂಕಿನ ಕೃಷ್ಣಪ್ಪ ಪುರುಷೋತ್ತಮ, ಜಯಪ್ರಕಾಶ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ರಾಮಬಾಬು ರಾಯಲ, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ತಿಮ್ಮಣ್ಣ ನಾಯಕ, ಎಂಜಿನಿಯರ್ ಸಂತೋಷ ಸಿ, ಉಪಸ್ಥಿತರಿದ್ದರು.</p>.<p>ಅಶೋಕ ಸ್ವಾಗತಿಸಿದರು. ಶಂಕರಪ್ಪ ವಾಲಿ ನಿರೂಪಿಸಿದರು. ಪಂಜಾಬ್ ನ್ಯಾಷನಲ್ ಬ್ಯಾಂಕಿನ ವ್ಯವಸ್ಥಾಪಕ ಮಧುಸ್ಮಿತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಕುಟುಂಬದ ಸ್ವಾವಲಂಬನೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕುಟುಂಬದ ಆರ್ಥಿಕ ಸಬಲೀಕರಣ ಸ್ವಸಹಾಯ ಗುಂಪುಗಳಿಂದ ಮಾತ್ರ ಸಾಧ್ಯ’ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಹಾಯಕ ಪ್ರಧಾನ ವ್ಯವಸ್ಥಾಪಕ ಸೂರ್ಯಮನಿ ಸಾಹೊ ಹೇಳಿದರು.</p>.<p>ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್, ಜೀವನ ಮಿತ್ರ ಸಮಾಜ ಸೇವಾ ಸಂಸ್ಥೆ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಗದಲ್ಲಿಗುರುವಾರ ನಡೆದ ಬೃಹತ್ ಕೃಷಿ ಜಾಗರಣೆ ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಸಾಲ ಮೇಳದಲ್ಲಿ ಅವರು ಮಾತನಾಡಿದರು.</p>.<p>ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಅವರು 32 ಮಹಿಳಾ ಸ್ವಸಹಾಯ ಗುಂಪುಗಳ 350ಕ್ಕೂ ಅಧಿಕ ಸದಸ್ಯರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ನ ₹ 3. 20 ಕೋಟಿ ಮೊತ್ತದ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಿದರು.</p>.<p>ನಬಾರ್ಡ್ ಬ್ಯಾಂಕಿನ ಡಿಡಿಎಂ ಕಲಾವತಿ ಮಾತನಾಡಿ, ‘ಜಂಟಿ ಬಾಧ್ಯತಾ ಗುಂಪುಗಳಿಗೆ ಜೀವನ್ ಮಿತ್ರ ಸಮಾಜ ಸೇವಾ ಸಂಸ್ಥೆಯ ಮೂಲಕ ಸುಮಾರು 9000 ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗಿದೆ’ ಎಂದು ತಿಳಿಸಿದರು.</p>.<p>ಜೀವನ ಮಿತ್ರ ಸಮಾಜ ಸೇವಾ ಸಂಸ್ಥೆಯ ಕಾರ್ಯದರ್ಶಿ ನಟರಾಜ್ ಮಾತನಾಡಿ, ‘ಜೀವನ ಮಿತ್ರ ಸಮಾಜ ಸೇವಾ ಸಂಸ್ಥೆಯು 22 ವರ್ಷಗಳಿಂದ ಮಹಿಳಾ ಸ್ವಸಹಾಯ ಸಂಘಗಳ ಮತ್ತು ಜಂಟಿ ಬಾಧ್ಯತಾ ಗುಂಪುಗಳಿಗೆ ತರಬೇತಿ ಕೊಡುತ್ತ ಬರಲಾಗಿದೆ’ ಎಂದು ಹೇಳಿದರು.</p>.<p>‘ಆರು ರಾಷ್ಟ್ರೀಕೃತ ಬ್ಯಾಂಕ್ಗಳು, ಒಂದು ಆರ್ಆರ್ಬಿ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕುಗಳ ಜೊತೆ ಸ್ವಸಹಾಯ ಗುಂಪುಗಳ ನಡುವೆ ಸೇತುವೆಯಾಗಿ ನಮ್ಮ ಸಂಸ್ಥೆ ಕಾರ್ಯನಿರ್ವಹಿತ್ತಿದೆ. ಮಹಿಳೆಯರು ಮತ್ತು ರೈತರು ಉದ್ಯಮಿಗಳಾಗಲು ನಮ್ಮ ಸಂಸ್ಥೆ ಹಗಲಿರುಳು ಶ್ರಮಿಸುತ್ತಿದೆ’ ಎಂದು ತಿಳಿಸಿದರು.</p>.<p>ಹೈದರಾಬಾದ್ನ ಎಂಎಸ್ಎಂಇ ಫೌಂಡೇಶನ್ ಮುಖ್ಯಸ್ಥ ರಾಜಕುಮಾರ ಸೈಬರ್ ಅಪರಾಧಗಳ ಬಗ್ಗೆ ಮಾತನಾಡಿದರು.</p>.<p>ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣದ ಡೀನ್ ಸತೀಶಕುಮಾರ, ನಿವೃತ್ತ ರಿಸರ್ವ್ ಬ್ಯಾಂಕಿನ ಕೃಷ್ಣಪ್ಪ ಪುರುಷೋತ್ತಮ, ಜಯಪ್ರಕಾಶ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ರಾಮಬಾಬು ರಾಯಲ, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ತಿಮ್ಮಣ್ಣ ನಾಯಕ, ಎಂಜಿನಿಯರ್ ಸಂತೋಷ ಸಿ, ಉಪಸ್ಥಿತರಿದ್ದರು.</p>.<p>ಅಶೋಕ ಸ್ವಾಗತಿಸಿದರು. ಶಂಕರಪ್ಪ ವಾಲಿ ನಿರೂಪಿಸಿದರು. ಪಂಜಾಬ್ ನ್ಯಾಷನಲ್ ಬ್ಯಾಂಕಿನ ವ್ಯವಸ್ಥಾಪಕ ಮಧುಸ್ಮಿತ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>