<p><strong>ರಾಯಚೂರು:</strong> 'ಮಹಿಳೆಯರ ಸಬಲೀಕರಣಕ್ಕೆ ಎಲ್ಲರೂ ಕೈಜೋಡಿಸಬೇಕಾಗಿದೆ' ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>'ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಸಾಧನೆ ಮಾಡಿದ ಮಹಿಳೆಯರ ಬೆನ್ನಲುಬಾಗಿ ಕಾಂಗ್ರೆಸ್ ಮಹಿಳಾ ಘಟಕ ಇರಲಿದೆ' ಎಂದು ವಿವರಿಸಿದರು.</p>.<p><br />ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕಿಯರಾದ ರಾಣಿ ರಿಚರ್ಡ್, ಶಶಿಕಲಾ, ಮಂಗಮ್ಮ, ಗಿರಜಾ, ಪಾರ್ವತಿ, ಪರವೀನ್ ಬೇಗಂ, ಲಿಯಾಕತ್ ಬೇಗಂ ಅವರನ್ನು ಸನ್ಮಾನಿಸಲಾಯಿತು.</p>.<p><br />ಕಾಂಗ್ರೆಸ್ ನ ಮಹಿಳಾ ರಾಜ್ಯ ಘಟಕದ ಉಪಾಧ್ಯಕ್ಷೆ ಶ್ರೀದೇವಿ ನಾಯಕ, ಆರ್ಡಿಎ ಸದಸ್ಯೆ ಪ್ರತಿಭಾ ರೆಡ್ಡಿ, ಶಶಿಕಲಾ, ಸುಲೋಚನಾ ಸೇರಿದಂತೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> 'ಮಹಿಳೆಯರ ಸಬಲೀಕರಣಕ್ಕೆ ಎಲ್ಲರೂ ಕೈಜೋಡಿಸಬೇಕಾಗಿದೆ' ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>'ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಸಾಧನೆ ಮಾಡಿದ ಮಹಿಳೆಯರ ಬೆನ್ನಲುಬಾಗಿ ಕಾಂಗ್ರೆಸ್ ಮಹಿಳಾ ಘಟಕ ಇರಲಿದೆ' ಎಂದು ವಿವರಿಸಿದರು.</p>.<p><br />ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕಿಯರಾದ ರಾಣಿ ರಿಚರ್ಡ್, ಶಶಿಕಲಾ, ಮಂಗಮ್ಮ, ಗಿರಜಾ, ಪಾರ್ವತಿ, ಪರವೀನ್ ಬೇಗಂ, ಲಿಯಾಕತ್ ಬೇಗಂ ಅವರನ್ನು ಸನ್ಮಾನಿಸಲಾಯಿತು.</p>.<p><br />ಕಾಂಗ್ರೆಸ್ ನ ಮಹಿಳಾ ರಾಜ್ಯ ಘಟಕದ ಉಪಾಧ್ಯಕ್ಷೆ ಶ್ರೀದೇವಿ ನಾಯಕ, ಆರ್ಡಿಎ ಸದಸ್ಯೆ ಪ್ರತಿಭಾ ರೆಡ್ಡಿ, ಶಶಿಕಲಾ, ಸುಲೋಚನಾ ಸೇರಿದಂತೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>