ತುಂಗಭದ್ರಾ ಯೋಜನೆ ಮುಖ್ಯ ಅಧೀಕ್ಷಕ ಮಂಜಪ್ಪ ಮಾತನಾಡಿ, ಜಲಾಶಯದಲ್ಲಿ ಸಂಗ್ರಹವಿರುವ ನೀರು ಬೇಸಿಗೆ ಕುಡಿಯುವ ನೀರು, ಈಗಿರುವ ಬೆಳೆ ಮಾತ್ರ ಬಳಕೆ ಮಾಡಲು ಸಾಧ್ಯವಾಗಲಿದೆ. ನದಿ ಮೇಲ್ಬಾಗದಲ್ಲಿ ಮಳೆಯಾಗದೇ ಇರುವುದರಿಂದ ಬೇಸಿಗೆ ಬೆಳೆಗೆ ನೀರು ಹರಿಸುವ ಭರವಸೆ ಈಗಲೇ ನೀಡಲು ಆಗುವುದಿಲ್ಲ. ಇದೇ ತಿಂಗಳ ಮೂರನೇ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಸಲಹಾ ಸಮಿತಿ ಅಧ್ಯಕ್ಷರೂ ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಲಾಗಿದೆ. ನೀರಿನ ಲಭ್ಯತೆಯ ಮೇಲೆ ನೀರು ಹರಿಸಲು ನಿರ್ಧರಿಸಬೇಕಾಗುತ್ತದೆ. ಕಳೆದ ಬಾರಿಗಿಂತ ಈ ಬಾರಿ ಮಳೆಯಾಗಿದ್ದರೂ ನೀರಿನ ಸಂಗ್ರಹ ಪ್ರಮಾಣ ಕುಸಿದಿದೆ. ಆಂದ್ರಪ್ರದೇಶದ ಪಾಲಿನ ನೀರು ಹಾಗ ರಾಜ್ಯಕ್ಕೆ ಲಭ್ಯವಾಗುವ ನೀರಿನ ಲಭ್ಯತೆ ಮೇಲೆ ನೀರು ಹರಿಸಲು ತೀರ್ಮಾನಿಸಬೇಕಿದೆ ಎಂದರು.