ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ತುಂತುರು ಮಳೆಯಲ್ಲೇ ಧ್ವಜಾರೋಹಣ

Last Updated 15 ಆಗಸ್ಟ್ 2020, 4:34 IST
ಅಕ್ಷರ ಗಾತ್ರ

ರಾಯಚೂರು: ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ತುಂತುರು ಮಳೆಯಲ್ಲೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭ ನಡೆಯಿತು. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಪರೇಡ್ ಕಮಾಂಡರ್ ಬೆಂಗಾವಲಿನೊಂದಿಗೆ ಕವಾಯತು ತಂಡಗಳ ಪರಿವೀಕ್ಷಣೆ ಮಾಡಿದ ಉಪಮುಖ್ಯಮಂತ್ರಿ, ಜನರನ್ನು ಉದ್ದೇಶಿಸಿ ಮಾತನಾಡಿದರು.

ಧ್ವಜಾರೋಹಣ ಸಮಾರಂಭಕ್ಕೆ ಸಾರ್ವಜನಿಕರಿಗೆ ಅವಕಾಶ ಇರಲಿಲ್ಲ. ಆಹ್ವಾನಿತರು ಮಾತ್ರ ಪಾಲ್ಗೊಂಡಿದ್ದರು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕವಾಯತು ಪ್ರದರ್ಶನ ನೀಡಿದರು.

ಎರಡು ದಿನಗಳಿಂದ ಜಿಲ್ಲೆಯಾದ್ಯಂತ ತುಂತುರು ಮಳೆ ಬೀಳುತ್ತಿದ್ದು, ಮಲೆನಾಡಿನ ವಾತಾವರಣ ನಿರ್ಮಾಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT