<p><strong>ಕೊಪ್ಪಳ/ ರಾಯಚೂರು:</strong> ಕಲ್ಯಾಣ ಕರ್ನಾಟಕದ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಭಾನುವಾರ ಮಳೆಯಾಗಿದೆ. </p><p>ಕೊಪ್ಪಳದಲ್ಲಿ ಜಿಲ್ಲೆಯಲ್ಲಿ ಒಂದು ವಾರದಿಂದ ಮಳೆ ಚುರುಕಾಗಿದ್ದು, ಕೊಪ್ಪಳ ನಗರ ಹಾಗೂ ತಾಲ್ಲೂಕಿನ ಹಲವು ಗ್ರಾಮಗಳು ಹಾಗೂ ಗಂಗಾವತಿಯಲ್ಲಿ ಮಳೆ ಸುರಿದಿದೆ.</p><p>ಮಳೆ ಕೊರತೆಯಿಂದ ಬರಗಾಲದ ಆತಂಕ ಮನೆ ಮಾಡಿತ್ತು. ಉತ್ತಮ ಮಳೆ ರೈತರಲ್ಲಿ ಖುಷಿಯ ಭಾವ ಮೂಡಿಸಿದೆ. ಈಗಾಗಲೇ ಆಗಿರುವ ಬಿತ್ತನೆಗೂ<br>ಅನುಕೂಲವಾಗಲಿದೆ. </p><p>ತಾಲ್ಲೂಕಿನ ಅಳವಂಡಿ ಸಮೀಪದ ಬಿಕನಹಳ್ಳಿ ಗ್ರಾಮದಿಂದ ಕೊಪ್ಪಳ–ಅಳವಂಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಕ್ರಾಸ್ ತನಕದ ರಸ್ತೆಯಲ್ಲಿ ಮಧ್ಯದಲ್ಲಿರುವ ಹಳ್ಳ ತುಂಬಿ ಹರಿದಿದ್ದು ಹಳ್ಳದಾಟಲು ಜನ ಪರದಾಡಿದರು.</p><p>ರಾಯಚೂರು ನಗರದಲ್ಲಿ ಅರ್ಧ ಗಂಟೆ ಧಾರಾಕಾರ ಮಳೆಯಾಗಿದೆ. ಮಾನ್ವಿ, ದೇವದುರ್ಗ, ಜಾಲಹಳ್ಳಿಯಲ್ಲೂ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ರಸ್ತೆ ಮೇಲೆ ನೀರು ಹರಿಯಿತು.</p><p>ಜಿಲ್ಲೆಯಲ್ಲಿ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾ<br>ಲಯದ ಗ್ರಾಮೀಣ ಹವಾಮಾನ ಘಟಕ ಮುನ್ಸೂಚನೆ ನೀಡಿದೆ.</p><p><strong>ಮಡಿಕೇರಿಯಲ್ಲಿ ಮಳೆ: ನಗರದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗ್ಗೆಯವರೆಗೆ ಮಳೆ ಸುರಿಯಿತು.</strong></p><p>ಭಾಗಮಂಡಲದಲ್ಲಿ 4 ಸೆಂ.ಮೀ., ಮಡಿಕೇರಿ 3.5,<br>ಸುಂಟಿಕೊಪ್ಪದಲ್ಲಿ 3 ಸೆಂ.ಮೀ. ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ/ ರಾಯಚೂರು:</strong> ಕಲ್ಯಾಣ ಕರ್ನಾಟಕದ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ಭಾನುವಾರ ಮಳೆಯಾಗಿದೆ. </p><p>ಕೊಪ್ಪಳದಲ್ಲಿ ಜಿಲ್ಲೆಯಲ್ಲಿ ಒಂದು ವಾರದಿಂದ ಮಳೆ ಚುರುಕಾಗಿದ್ದು, ಕೊಪ್ಪಳ ನಗರ ಹಾಗೂ ತಾಲ್ಲೂಕಿನ ಹಲವು ಗ್ರಾಮಗಳು ಹಾಗೂ ಗಂಗಾವತಿಯಲ್ಲಿ ಮಳೆ ಸುರಿದಿದೆ.</p><p>ಮಳೆ ಕೊರತೆಯಿಂದ ಬರಗಾಲದ ಆತಂಕ ಮನೆ ಮಾಡಿತ್ತು. ಉತ್ತಮ ಮಳೆ ರೈತರಲ್ಲಿ ಖುಷಿಯ ಭಾವ ಮೂಡಿಸಿದೆ. ಈಗಾಗಲೇ ಆಗಿರುವ ಬಿತ್ತನೆಗೂ<br>ಅನುಕೂಲವಾಗಲಿದೆ. </p><p>ತಾಲ್ಲೂಕಿನ ಅಳವಂಡಿ ಸಮೀಪದ ಬಿಕನಹಳ್ಳಿ ಗ್ರಾಮದಿಂದ ಕೊಪ್ಪಳ–ಅಳವಂಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಕ್ರಾಸ್ ತನಕದ ರಸ್ತೆಯಲ್ಲಿ ಮಧ್ಯದಲ್ಲಿರುವ ಹಳ್ಳ ತುಂಬಿ ಹರಿದಿದ್ದು ಹಳ್ಳದಾಟಲು ಜನ ಪರದಾಡಿದರು.</p><p>ರಾಯಚೂರು ನಗರದಲ್ಲಿ ಅರ್ಧ ಗಂಟೆ ಧಾರಾಕಾರ ಮಳೆಯಾಗಿದೆ. ಮಾನ್ವಿ, ದೇವದುರ್ಗ, ಜಾಲಹಳ್ಳಿಯಲ್ಲೂ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ರಸ್ತೆ ಮೇಲೆ ನೀರು ಹರಿಯಿತು.</p><p>ಜಿಲ್ಲೆಯಲ್ಲಿ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾ<br>ಲಯದ ಗ್ರಾಮೀಣ ಹವಾಮಾನ ಘಟಕ ಮುನ್ಸೂಚನೆ ನೀಡಿದೆ.</p><p><strong>ಮಡಿಕೇರಿಯಲ್ಲಿ ಮಳೆ: ನಗರದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ಬೆಳಗ್ಗೆಯವರೆಗೆ ಮಳೆ ಸುರಿಯಿತು.</strong></p><p>ಭಾಗಮಂಡಲದಲ್ಲಿ 4 ಸೆಂ.ಮೀ., ಮಡಿಕೇರಿ 3.5,<br>ಸುಂಟಿಕೊಪ್ಪದಲ್ಲಿ 3 ಸೆಂ.ಮೀ. ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>