<p><strong>ರಾಯಚೂರು: </strong>ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ( ಒನ್ ನೇಷನ್ ಒನ್ ರೇಷನ್) ಯೋಜನೆಯನ್ನು ರಾಜ್ಯದಲ್ಲೂ ಅನುಷ್ಠಾನ ಗೊಳಿಸಬೇಕು ಎಂದು ಒತ್ತಾಯಿಸಿ ಲೋಕ ಜನಶಕ್ತಿ ಪಾರ್ಟಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಕೇಂದ್ರ ಆಹಾರ ಸಚಿವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಒನ್ ನೇಷನ್ ಒನ್ ರೇಷನ್ ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ 20 ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಈ ಯೋಜನೆಯಿಂದ ಪಡಿತರದಾರ ವಲಸೆ ಕಾರ್ಮಿಕರಿಗೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ದುಡಿಯಲು ಹೋದ ಕಾರ್ಮಿಕರಿಗೆ ಅನುಕೂಲವಾಗಲಿದೆ. ಯೋಜನೆ ಮೂಲಕ ಭಾರೀ ಅವ್ಯವಹಾರ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆ.</p>.<p>ಎನ್.ಎಫ್.ಎಸ್.ಎ. ಅಡಿಯಲ್ಲಿ ಪಡಿತರದಾರರಿಗೆ ಒಂದು ಕೆ.ಜಿ. ಅಕ್ಕಿಗೆ ₹ 3, ಗೋಧಿಗೆ ₹ 2 ನಿಗದಿಗೊಳಿಸಿ ಸರ್ಕಾರ ಒಂದು ತಿಂಗಳಿಗೆ ಪಿ.ಡಿ.ಎಸ್ . ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ಮತ್ತು 1 ಕೆ.ಜಿ. ದ್ವಿದಳ ಧಾನ್ಯವನ್ನು ಕೊಡುತ್ತದೆ ಇದರಿಂದ ಬಡವರಿಗೆ ಅನುಕೂಲವಾಗಿದೆ. ಈ ಮಹತ್ವದ ಯೋಜನೆಯನ್ನು ತಕ್ಷಣವೇ ಕರ್ನಾಟಕ ರಾಜ್ಯದಲ್ಲೂ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಆಶಾರೆಡ್ಡಿ, ರಂಗಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ( ಒನ್ ನೇಷನ್ ಒನ್ ರೇಷನ್) ಯೋಜನೆಯನ್ನು ರಾಜ್ಯದಲ್ಲೂ ಅನುಷ್ಠಾನ ಗೊಳಿಸಬೇಕು ಎಂದು ಒತ್ತಾಯಿಸಿ ಲೋಕ ಜನಶಕ್ತಿ ಪಾರ್ಟಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಕೇಂದ್ರ ಆಹಾರ ಸಚಿವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಒನ್ ನೇಷನ್ ಒನ್ ರೇಷನ್ ಯೋಜನೆಯನ್ನು ಕೇಂದ್ರ ಸರ್ಕಾರ ಈಗಾಗಲೇ 20 ರಾಜ್ಯಗಳಲ್ಲಿ ಜಾರಿಗೆ ತಂದಿದೆ. ಈ ಯೋಜನೆಯಿಂದ ಪಡಿತರದಾರ ವಲಸೆ ಕಾರ್ಮಿಕರಿಗೆ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ದುಡಿಯಲು ಹೋದ ಕಾರ್ಮಿಕರಿಗೆ ಅನುಕೂಲವಾಗಲಿದೆ. ಯೋಜನೆ ಮೂಲಕ ಭಾರೀ ಅವ್ಯವಹಾರ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗುತ್ತದೆ.</p>.<p>ಎನ್.ಎಫ್.ಎಸ್.ಎ. ಅಡಿಯಲ್ಲಿ ಪಡಿತರದಾರರಿಗೆ ಒಂದು ಕೆ.ಜಿ. ಅಕ್ಕಿಗೆ ₹ 3, ಗೋಧಿಗೆ ₹ 2 ನಿಗದಿಗೊಳಿಸಿ ಸರ್ಕಾರ ಒಂದು ತಿಂಗಳಿಗೆ ಪಿ.ಡಿ.ಎಸ್ . ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ಮತ್ತು 1 ಕೆ.ಜಿ. ದ್ವಿದಳ ಧಾನ್ಯವನ್ನು ಕೊಡುತ್ತದೆ ಇದರಿಂದ ಬಡವರಿಗೆ ಅನುಕೂಲವಾಗಿದೆ. ಈ ಮಹತ್ವದ ಯೋಜನೆಯನ್ನು ತಕ್ಷಣವೇ ಕರ್ನಾಟಕ ರಾಜ್ಯದಲ್ಲೂ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಆಶಾರೆಡ್ಡಿ, ರಂಗಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>