ರಾಯಚೂರು: ಜಿಲ್ಲೆಯಲ್ಲಿನ ಮತ್ತೆ ಇಬ್ಬರು ಕಾನ್ ಸ್ಟೇಬಲ್ ಗಳಿಗೆ ಕೋವಿಡ್ ದೃಢವಾಗಿರುವ ಶಂಕೆಯಿದ್ದು, ನಗರದ ಪಶ್ಚಿಮ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.
ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕ್ವಾರಂಟೈನ್ ಕೇಂದ್ರಕ್ಕೆ ಕಾನ್ ಸ್ಟೇಬಲ್ ಗಳನ್ನು ನಿಯೋಜಿಸಲಾಗಿತ್ತು.
ಮಹಾರಾಷ್ಟ್ರದಿಂದ ಬಂದಿದ್ದ ಜನರು ಈ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಅಧಿಕೃತ ಮಾಹಿತಿ ಘೋಷಣೆ ಬಾಕಿ ಇದೆ.
ಈ ಮೊದಲು ದೇವದುರ್ಗ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಒಬ್ಬರಿಗೆ ಕೋವಿಡ್ ದೃಢವಾಗಿತ್ತು. ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.