ಕವಿತಾಳ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ ನೇತೃತ್ವದಲ್ಲಿ ಅಧಿಕಾರಿಗಳು ಸೋಮವಾರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಚೀಲ ಮತ್ತು ಲೋಟಗಳನ್ನು ವಶಪಡಿಸಿಕೊಂಡರು.
‘ಮರು ಬಳಕೆ ಸಾಧ್ಯವಾಗದಂಥ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ. ಆದರೂ ಬಳಸಲಾಗುತ್ತಿದೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಕಿರಾಣಿ ಹಾಗೂ ಬಟ್ಟೆ ಅಂಗಡಿ, ಹಾರ್ಡ್ವೇರ್, ವೈನ್ಶಾಪ್ ಸೇರಿ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು. ಅಂದಾಜು 1 ಕ್ವಿಂಟಲ್ನಷ್ಟು ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಪಡಿಸಿಕೊ ಳ್ಳಲಾಗಿದೆ. ಸಂಬಂಧಿಸಿದವರಿಗೆ ದಂಡ ವಿಧಿಸಲಾಗಿದೆ’ ಎಂದು ಮುಖ್ಯಾಧಿಕಾರಿ ತಿಮ್ಮಪ್ಪ ಜಗ್ಲಿ ತಿಳಿಸಿದರು.
ಪಟ್ಟಣ ಪಂಚಾಯಿತಿ ಸಿಬ್ಬಂದಿ ಮಾರುತಿ, ಮಹೇಶ, ವೆಂಕಟೇಶ, ಖಲೀಫ್, ಆಲಂ, ಸಂತೋಷ, ದುರುಗಪ್ಪ ಮತ್ತು ರಮೇಶ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.