ನವದೆಹಲಿ: ಜೆಡಿಯುನ ಬಂಡಾಯ ಸಂಸದ ಶರದ್ ಯಾದವ್ ಅವರು ತಮ್ಮನ್ನು ರಾಜ್ಯಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಇತ್ಯರ್ಥ ಆಗುವ ತನಕ ವೇತನ ಮತ್ತು ಭತ್ಯೆಗಳನ್ನು ಪಡೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಶರದ್ ಅವರು ವೇತನ, ಭತ್ಯೆ ಪಡೆದುಕೊಳ್ಳಬಹುದು ಮತ್ತು ಸರ್ಕಾರಿ ಬಂಗಲೆಯನ್ನು ಉಳಿಸಿಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್ ಕಳೆದ ಡಿಸೆಂಬರ್ 15ರಂದು ಆದೇಶ ನೀಡಿತ್ತು.
ಜೆಡಿಯುನ ರಾಜ್ಯಸಭಾ ಸದಸ್ಯ ರಾಮಚಂದ್ರ ಪ್ರಸಾದ್ ಸಿಂಗ್ ಅವರು ಈ ಆದೇಶವನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.