ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ: ಮಳೆಗೆ ನೆಲಕಚ್ಚಿದ ಭತ್ತ

Last Updated 25 ಅಕ್ಟೋಬರ್ 2021, 3:37 IST
ಅಕ್ಷರ ಗಾತ್ರ

ಮಸ್ಕಿ: ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಗೆ ತಾಲ್ಲೂಕಿನ ವಿವಿಧೆಡೆ ಭತ್ತದ ಬೆಳೆ ನೆಲಕಚ್ಚಿದೆ.

ತಾಲ್ಲೂಕಿನ ಬಸಾಪೂರ, ಹಾಲಾಪೂರ, ಜಂಗಮರಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶನಿವಾರ ರಾತ್ರಿ 6 ರಿಂದ ಸುಮಾರು 4 ಗಂಟೆಗಳ ಕಾಲ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ.

ಬಸಾಪೂರ ಗ್ರಾಮದ ಮಲ್ಲಪ್ಪ ಸಜ್ಜನ ಅವರು ಮೂರು ಎಕರೆಯಲ್ಲಿ ಬೆಳೆದಿದ್ದ ಭತ್ತ ಮಳೆಗೆ ಹಾಳಾಗಿದೆ. ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ಮಳೆಯಿಂದಾದ ನಷ್ಟದ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಹಶೀಲ್ದಾರ್ ಕವಿತಾ ಆರ್. ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT