<p><strong>ಮಸ್ಕಿ: </strong>ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಗೆ ತಾಲ್ಲೂಕಿನ ವಿವಿಧೆಡೆ ಭತ್ತದ ಬೆಳೆ ನೆಲಕಚ್ಚಿದೆ.</p>.<p>ತಾಲ್ಲೂಕಿನ ಬಸಾಪೂರ, ಹಾಲಾಪೂರ, ಜಂಗಮರಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಶನಿವಾರ ರಾತ್ರಿ 6 ರಿಂದ ಸುಮಾರು 4 ಗಂಟೆಗಳ ಕಾಲ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ.</p>.<p>ಬಸಾಪೂರ ಗ್ರಾಮದ ಮಲ್ಲಪ್ಪ ಸಜ್ಜನ ಅವರು ಮೂರು ಎಕರೆಯಲ್ಲಿ ಬೆಳೆದಿದ್ದ ಭತ್ತ ಮಳೆಗೆ ಹಾಳಾಗಿದೆ. ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>‘ಮಳೆಯಿಂದಾದ ನಷ್ಟದ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಹಶೀಲ್ದಾರ್ ಕವಿತಾ ಆರ್. ಅವರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮಸ್ಕಿ: </strong>ಶನಿವಾರ ರಾತ್ರಿ ಸುರಿದ ಅಕಾಲಿಕ ಮಳೆಗೆ ತಾಲ್ಲೂಕಿನ ವಿವಿಧೆಡೆ ಭತ್ತದ ಬೆಳೆ ನೆಲಕಚ್ಚಿದೆ.</p>.<p>ತಾಲ್ಲೂಕಿನ ಬಸಾಪೂರ, ಹಾಲಾಪೂರ, ಜಂಗಮರಹಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಬೆಳೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಶನಿವಾರ ರಾತ್ರಿ 6 ರಿಂದ ಸುಮಾರು 4 ಗಂಟೆಗಳ ಕಾಲ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದೆ.</p>.<p>ಬಸಾಪೂರ ಗ್ರಾಮದ ಮಲ್ಲಪ್ಪ ಸಜ್ಜನ ಅವರು ಮೂರು ಎಕರೆಯಲ್ಲಿ ಬೆಳೆದಿದ್ದ ಭತ್ತ ಮಳೆಗೆ ಹಾಳಾಗಿದೆ. ಸ್ಥಳಕ್ಕೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>‘ಮಳೆಯಿಂದಾದ ನಷ್ಟದ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಹಶೀಲ್ದಾರ್ ಕವಿತಾ ಆರ್. ಅವರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>