ಚರಂಡಿಗಳಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ಮಳೆನೀರು ಸಂಗ್ರಹವಾಗಿದ್ದು, ಜನಸಂಚಾರ ಮತ್ತು ವಾಹನಗಳ ಸಂಚಾರವು ಸಂಕಷ್ಟಮಯವಾಗಿದೆ. ಬೀದಿ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ. ರಾಯಚೂರು ತಾಲ್ಲೂಕಿನ ಬಹಳಷ್ಟು ಗ್ರಾಮೀಣ ಮಾರ್ಗಗಳ ಸ್ಥಿತಿ ಅಧೋಗತಿಯಾಗಿದ್ದು, ವಾಹನಗಳ ಸಂಚಾರ ಸಾಧ್ಯವಾಗುತ್ತಿಲ್ಲ. ಮುಖ್ಯವಾಗಿ ದೇವಸುಗೂರು ಹೋಬಳಿ, ಯರಗೇರಾ ಹೋಬಳಿಗಳಲ್ಲಿ ತೊಂದರೆ ಉಂಟಾಗಿದೆ.