‘ರಾಯಚೂರು ಜಿಲ್ಲೆಯ ಗಡಿ ಪ್ರದೇಶದಲ್ಲಿ ಪ್ರವಾಹ ಹೆಚ್ಚಿರುವ ಕಾರಣ ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುವುದು. ಲಿಂಗಸುಗೂರು, ದೇವದುರ್ಗ,ರಾಯಚೂರು ತಾಲ್ಲೂಕುಗಳ ಬಹುತೇಕ ನದಿ ಪಾತ್ರದ ಗ್ರಾಮಗಳು ಹಾಗೂ ನಡುಗಡ್ಡೆ ಪ್ರದೇಶಗಳಲ್ಲಿ ಜನರಿಗೆ ಸಮಸ್ಯೆ ಉಂಟಾಗಿದೆ’ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ. ವೇದಮೂರ್ತಿ ತಿಳಿಸಿದರು.