ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮಾರಲದಿನ್ನಿ, ಕಾಟಗಲ್, ಉಸ್ಕಿಹಾಳ, ಬೆಲ್ಲದಮರಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದ್ದು, ಕೊಯ್ಲು ಹಂತದಲ್ಲಿದ್ದ ನೂರಾರು ಎಕರೆ ಭತ್ತ ಹಾಳಾಗಿದೆ.
ಮಸ್ಕಿ ನಾಲಾ ಅಚ್ಚುಕಟ್ಟು ಪ್ರದೇಶಗಳಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಭತ್ತ ನೆಲಕಚ್ಚಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.