ರಾಯಚೂರು ನಗರದ ಮಡ್ಡಿಪೇಟೆ, ಸಿಯಾತಾಲಾಬ್ ಬಡಾವಣೆಯ ಕೆಲವು ಮನೆಗಳಿಗೆ ನೀರು ನುಗ್ಗಿದೆ. ಎಲ್ಬಿಎಸ್ ನಗರದಲ್ಲಿ ಮನೆಯೊಂದು ಕುಸಿದಿದೆ. ಮಾನ್ವಿ ಪಟ್ಟಣದ ಕೆಲವು ಓಣಿಗಳಲ್ಲಿ ನೀರು ಕಾಲುವೆಯಂತೆ ಹರಿದಿದೆ. ಕಚ್ಚಾರಸ್ತೆಗಳು ಕೊಚ್ಚಿಹೋಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಮಾನ್ವಿ ತಹಶೀಲ್ದಾರ್ ಕಚೇರಿ ಜಲಾವೃತವಾಗಿದೆ.