ರಾಯಚೂರು ತಾಲ್ಲೂಕಿನ ಗುಂಜಳ್ಳಿ ಸಮೀಪದ ಹೊಲಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿತ್ತು
ಮಸ್ಕಿಯ ಬಡಾವಣೆಯೊಂದರಲ್ಲಿ ರಸ್ತೆ ಮೇಲೆ ನೀರು ನಿಂತುಕೊಂಡಿತ್ತು
400 ಕ್ಯೂಸೆಕ್ ನೀರು ಬಿಡುಗಡೆ
ಮಸ್ಕಿ: ತಾಲ್ಲೂಕಿನ ಮಾರಲದಿನ್ನಿಯ ಮಸ್ಕಿ ಜಲಾಶಯದ ಒಳ ಹರಿವು ಹೆಚ್ಚುತ್ತಿದ್ದು ಹೆಚ್ಚುವರಿ ನೀರನ್ನು ಹಳ್ಳಕ್ಕೆ ಬಿಡುತ್ತಿರುವುದರಿಂದ ಹಳ್ಳದ ದಂಡೆಯ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ತಹಶೀಲ್ದಾರ್ ಮಲ್ಲಪ್ಪ ಕೆ. ಯರಗೋಳ ಮನವಿ ಮಾಡಿದ್ದಾರೆ. ಗದಗ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚು ಮಳೆ ಆಗುತ್ತಿದ್ದರಿಂದ ಮಸ್ಕಿ ಜಲಾಶಯ ಗರಿಷ್ಠ ಮಟ್ಟ ಕಾಯ್ದುಕೊಂಡು ಹೆಚ್ಚುವರಿ 400 ಕ್ಯೂಸೆಕ್ ನೀರನ್ನು ಸೋಮವಾರದಿಂದ ಹಳ್ಳಕ್ಕೆ ಬಿಡಲಾಗುತ್ತಿದೆ ಎಂದು ಯೋಜನೆ ಅಧಿಕಾರಿಗಳು ತಿಳಿಸಿದ್ದಾರೆ. ಗ್ರಾಮಗಳ ಜನ ಹಾಗೂ ಜಾನುವಾರುಗಳು ಮಸ್ಕಿ ಹಳ್ಳದಲ್ಲಿ ಇಳಿಯದಂತೆ ನಿಷೇಧಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸಿಬ್ಬಂದಿ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರವಾಹದ ಮುನ್ಸೂಚನೆ ಕಂಡುಬಂದರೆ ಗ್ರಾಮ ಲೆಕ್ಕಾಧಿಕಾರಿ ಕಂದಾಯ ನಿರೀಕ್ಷಕರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪೊಲೀಸ್ ಇಲಾಖೆ ಹಾಗೂ ಮಸ್ಕಿ ನಾಲಾ ಯೋಜನೆ ಅಧಿಕಾರಿಗಳು ಕೂಡಲೇ ತಾಲ್ಲೂಕು ಆಡಳಿತಕ್ಕೆ ಮಾಹಿತಿ ಕೊಡುವಂತೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.