ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ವಿವಿಧೆಡೆ ಸುರಿದ ಮಳೆ

Last Updated 1 ಸೆಪ್ಟೆಂಬರ್ 2019, 5:07 IST
ಅಕ್ಷರ ಗಾತ್ರ

ರಾಯಚೂರು:ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ ಬಿರುಸಾಗಿ ಮಳೆ ಸುರಿಯಿತು.

ಶಕ್ತಿನಗರ, ಮಾನ್ವಿ, ದೇವದುರ್ಗ, ಜಾಲಹಳ್ಳಿ, ಕವಿತಾಳ ಹಾಗೂ ಸಿರವಾರದಲ್ಲಿ ಒಂದು ತಾಸಿಗೂ ಹೆಚ್ಚುಕಾಲ ಮಳೆ ಸುರಿದಿದ್ದರಿಂದ ತಂಪು ಹರಡಿತು. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯು ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ತಡರಾತ್ರಿವರೆಗೂ ತುಂತುರು ಮಳೆ ಮುಂದುವರಿದಿತ್ತು. ಗಣೇಶನ ಆಗಮನ ಪೂರ್ವ ಮಳೆ ಆರಂಭವಾಗಿರುವುದಕ್ಕೆ ರೈತ ಸಮುದಾಯದಲ್ಲಿ ಹರ್ಷ ಮೂಡಿದೆ. ಸಮರ್ಪಕವಾಗಿ ಮಳೆಯಾದರೆ ಹಿಂಗಾರು ಹಂಗಾಮಿನಲ್ಲಿ ಅಲ್ಪಾವಧಿ ಬೆಳೆಗಳನ್ನಾದರೂ ಬೆಳೆಯುವುದಕ್ಕೆ ನೆರವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT