ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ಸಾಧಾರಣ ಮಳೆ

Last Updated 12 ಸೆಪ್ಟೆಂಬರ್ 2021, 3:49 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆ ಸುರಿದಿದೆ.

ರಾಯಚೂರು ನಗರ, ಶಕ್ತಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲಕಾಲ ಬಿರುಸಾಗಿ ಮಳೆ ಸುರಿಯಿತು. ರಸ್ತೆಗಳಲ್ಲಿ, ತಗ್ಗು-ದಿನ್ನೆಗಳಲ್ಲಿ ನೀರು ಸಂಗ್ರಹವಾಯಿತು. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಮಳೆಯಿಂದ ಬೆಳೆಗಳಿಗೆ ಅನುಕೂಲವಾಗಿದೆ. ಈಗಾಗಲೇ ಬೆಳೆಗಳಲ್ಲಿದ್ದ ಕಳೆ ತೆಗೆದಿರುವ ರೈತರು ಸಂತುಷ್ಟಗೊಂಡಿದ್ದಾರೆ.

ತೊಗರಿ, ಹತ್ತಿ ಹಾಗೂ ಭತ್ತದ ಬೆಳೆಗಳು ಹುಲುಸಾಗಿ ಬೆಳೆದಿವೆ. ತೇವಾಂಶದ ಕೊರತೆಯಿಲ್ಲ.

ಮಳೆಯಿಂದ ಯಾವುದೇ ಹಾನಿ ಉಂಟಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT