<p><strong>ಮಂತ್ರಾಲಯ (ರಾಯಚೂರು):</strong> ಗುರುಸಾರ್ವಭೌಮ ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ ಅಂಗವಾಗಿ ಭಾನುವಾರ ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರತೀರ್ಥ ಶ್ರೀಗಳ ನೇತೃತ್ವದಲ್ಲಿ ರಾಯರ ಪೂರ್ವ ಆರಾಧನೆ ಹಾಗೂ ರಜತ ಸಿಂಹವಾಹನೋತ್ಸವ ಅದ್ಧೂರಿಯಾಗಿ ಜರುಗಿತು.</p>.<p>ಸುಬುಧೇಂದ್ರ ತೀರ್ಥರು ರಾಘವೇಂದ್ರ ಸ್ವಾಮಿಗಳ ಬೃಂದಾವನ, ಬ್ರಹ್ಮ ಕರಾರ್ಚಿತ ಮೂಲ ರಾಮದೇವರ ಪೂಜೆ ನೆರವೇರಿಸಿ ಮಹಾಮಂಗಳಾರತಿ ಬೆಳಗಿದರು. ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಲಂಕಾರ, ಪಂಡಿತರಿಂದ ಪ್ರವಚನ ಹಾಗೂ ಭಜನೆ ನಡೆಯಿತು.</p>.<p>ಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ, ‘ಭಾರತದ ಎಂಟು ಸ್ವಯಂ ವ್ಯಕ್ತ ಕ್ಷೇತ್ರಗಳಲ್ಲಿ<br>ಮೊದಲನೆಯ ಕ್ಷೇತ್ರವಾದ ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನದಿಂದ ಆಗಮಿಸಿರುವ ಶೇಷವಸ್ತ್ರವನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಂಡು ಶ್ರೀರಾಘವೇಂದ್ರ ಸ್ವಾಮಿಗಳಿಗೆ<br>ಸಮರ್ಪಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ತಮಿಳುನಾಡು ಸರ್ಕಾರ ರಾಯರಿಗೆ ಪ್ರತಿವರ್ಷ ಶೇಷವಸ್ತ್ರ ಕೊಡುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದೆ. ರಾಯರ ಆರಾಧನಾ ಸಮಯದಲ್ಲಿ ಟಿಟಿಡಿ, ಶ್ರೀರಂಗ, ಅವೋಬಿಳಂ ಹಾಗೂ ಕಾಂಚಿ ಕ್ಷೇತ್ರಗಳಿಂದ ಶ್ರೀಮಠಕ್ಕೆ ಬರುವ ವಸ್ತ್ರಪ್ರಸಾದವನ್ನು ಗುರುರಾಯರಿಗೆ ಸಮರ್ಪಿಸುವ ಸಂಪ್ರದಾಯ ಹಾಕಿಕೊಳ್ಳಲಾಗಿದೆ‘ ಎಂದು ಹೇಳಿದರು.</p>.<p>‘ಧಾರ್ಮಿಕ ಕಾರ್ಯವನ್ನು ಮುಂದುವರಿಸಿಕೊಂಡು ಬಂದಿರುವ ಭಕ್ತರಿಗೆ ಗುರುಗಳ ಹಾಗೂ ಭಗವಂತನ ಅನುಗ್ರಹ ದೊರೆಯಲಿ’ ಎಂದು ಪ್ರಾರ್ಥಿಸಿದರು.</p>.<p>ಬೆಂಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ಹೈದರಾಬಾದ್, ಕರ್ನೂಲ್, ಅನಂತಪುರ, ಶ್ರೀರಂಗಂ ಹಾಗೂ ಮುಂಬೈನಿಂದ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ. ಮಧ್ವ ಮಾರ್ಗವನ್ನು ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.</p>.<p>ಮಂತ್ರಾಲಯದಲ್ಲಿ ಆಧ್ಮಾತ್ಮಿಕ ವಾತಾವರಣ ಸೃಷ್ಟಿಯಾಗಿದ್ದು, ಭಕ್ತರು ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.</p>.<p> <strong>ಮಧ್ಯಾರಾಧನೆ</strong> </p><ul><li><p>ಆ.11ರಂದು ಮಧ್ಯಾರಾಧನೆ ಮಹಾ ಪಂಚಾಮೃತ ಅಭಿಷೇಕ ಗಜವಾಹನೋತ್ಸವ ಹಾಗೂ ಸ್ವರ್ಣ ರಥೋತ್ಸವ ನಡೆಯಲಿದೆ. </p></li><li><p>ಆ.12 ರಂದು ಉತ್ತರ ಆರಾಧನೆ ಬೆಳಿಗ್ಗೆ 8 ಗಂಟೆಗೆ ವಸಂತೋತ್ಸವ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ವಜ್ರಕವಚ ಸಮರ್ಪಣೆ 10 ಗಂಟೆಗೆ ಮಹಾರಥೋತ್ಸವ ಜರುಗಲಿದೆ. </p></li><li><p>ಆ.13ರಂದು ಅಶ್ವ ವಾಹನೋತ್ಸವ ಹಾಗೂ ಶ್ರೀಸುಗಣೇಂದ್ರ ತೀರ್ಥರ ಆರಾಧಾನೆ </p></li><li><p>ಆ.14ರಂದು ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯ ವಿದ್ವಾನ ನರಾಚಾರಿಆಚಾರ ವಾಲ್ವೆಕರ್ ಅವರಿಂದ ಪ್ರವಚನ ಹಾಗೂ ರಾತ್ರಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂತ್ರಾಲಯ (ರಾಯಚೂರು):</strong> ಗುರುಸಾರ್ವಭೌಮ ರಾಘವೇಂದ್ರ ತೀರ್ಥರ 354ನೇ ಆರಾಧನಾ ಮಹೋತ್ಸವ ಅಂಗವಾಗಿ ಭಾನುವಾರ ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರತೀರ್ಥ ಶ್ರೀಗಳ ನೇತೃತ್ವದಲ್ಲಿ ರಾಯರ ಪೂರ್ವ ಆರಾಧನೆ ಹಾಗೂ ರಜತ ಸಿಂಹವಾಹನೋತ್ಸವ ಅದ್ಧೂರಿಯಾಗಿ ಜರುಗಿತು.</p>.<p>ಸುಬುಧೇಂದ್ರ ತೀರ್ಥರು ರಾಘವೇಂದ್ರ ಸ್ವಾಮಿಗಳ ಬೃಂದಾವನ, ಬ್ರಹ್ಮ ಕರಾರ್ಚಿತ ಮೂಲ ರಾಮದೇವರ ಪೂಜೆ ನೆರವೇರಿಸಿ ಮಹಾಮಂಗಳಾರತಿ ಬೆಳಗಿದರು. ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಲಂಕಾರ, ಪಂಡಿತರಿಂದ ಪ್ರವಚನ ಹಾಗೂ ಭಜನೆ ನಡೆಯಿತು.</p>.<p>ಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ, ‘ಭಾರತದ ಎಂಟು ಸ್ವಯಂ ವ್ಯಕ್ತ ಕ್ಷೇತ್ರಗಳಲ್ಲಿ<br>ಮೊದಲನೆಯ ಕ್ಷೇತ್ರವಾದ ಶ್ರೀರಂಗಂನ ಶ್ರೀರಂಗನಾಥ ದೇವಸ್ಥಾನದಿಂದ ಆಗಮಿಸಿರುವ ಶೇಷವಸ್ತ್ರವನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಂಡು ಶ್ರೀರಾಘವೇಂದ್ರ ಸ್ವಾಮಿಗಳಿಗೆ<br>ಸಮರ್ಪಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ತಮಿಳುನಾಡು ಸರ್ಕಾರ ರಾಯರಿಗೆ ಪ್ರತಿವರ್ಷ ಶೇಷವಸ್ತ್ರ ಕೊಡುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದೆ. ರಾಯರ ಆರಾಧನಾ ಸಮಯದಲ್ಲಿ ಟಿಟಿಡಿ, ಶ್ರೀರಂಗ, ಅವೋಬಿಳಂ ಹಾಗೂ ಕಾಂಚಿ ಕ್ಷೇತ್ರಗಳಿಂದ ಶ್ರೀಮಠಕ್ಕೆ ಬರುವ ವಸ್ತ್ರಪ್ರಸಾದವನ್ನು ಗುರುರಾಯರಿಗೆ ಸಮರ್ಪಿಸುವ ಸಂಪ್ರದಾಯ ಹಾಕಿಕೊಳ್ಳಲಾಗಿದೆ‘ ಎಂದು ಹೇಳಿದರು.</p>.<p>‘ಧಾರ್ಮಿಕ ಕಾರ್ಯವನ್ನು ಮುಂದುವರಿಸಿಕೊಂಡು ಬಂದಿರುವ ಭಕ್ತರಿಗೆ ಗುರುಗಳ ಹಾಗೂ ಭಗವಂತನ ಅನುಗ್ರಹ ದೊರೆಯಲಿ’ ಎಂದು ಪ್ರಾರ್ಥಿಸಿದರು.</p>.<p>ಬೆಂಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ಹೈದರಾಬಾದ್, ಕರ್ನೂಲ್, ಅನಂತಪುರ, ಶ್ರೀರಂಗಂ ಹಾಗೂ ಮುಂಬೈನಿಂದ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ. ಮಧ್ವ ಮಾರ್ಗವನ್ನು ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.</p>.<p>ಮಂತ್ರಾಲಯದಲ್ಲಿ ಆಧ್ಮಾತ್ಮಿಕ ವಾತಾವರಣ ಸೃಷ್ಟಿಯಾಗಿದ್ದು, ಭಕ್ತರು ಕುಟುಂಬದ ಸದಸ್ಯರೊಂದಿಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.</p>.<p> <strong>ಮಧ್ಯಾರಾಧನೆ</strong> </p><ul><li><p>ಆ.11ರಂದು ಮಧ್ಯಾರಾಧನೆ ಮಹಾ ಪಂಚಾಮೃತ ಅಭಿಷೇಕ ಗಜವಾಹನೋತ್ಸವ ಹಾಗೂ ಸ್ವರ್ಣ ರಥೋತ್ಸವ ನಡೆಯಲಿದೆ. </p></li><li><p>ಆ.12 ರಂದು ಉತ್ತರ ಆರಾಧನೆ ಬೆಳಿಗ್ಗೆ 8 ಗಂಟೆಗೆ ವಸಂತೋತ್ಸವ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ವಜ್ರಕವಚ ಸಮರ್ಪಣೆ 10 ಗಂಟೆಗೆ ಮಹಾರಥೋತ್ಸವ ಜರುಗಲಿದೆ. </p></li><li><p>ಆ.13ರಂದು ಅಶ್ವ ವಾಹನೋತ್ಸವ ಹಾಗೂ ಶ್ರೀಸುಗಣೇಂದ್ರ ತೀರ್ಥರ ಆರಾಧಾನೆ </p></li><li><p>ಆ.14ರಂದು ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯ ವಿದ್ವಾನ ನರಾಚಾರಿಆಚಾರ ವಾಲ್ವೆಕರ್ ಅವರಿಂದ ಪ್ರವಚನ ಹಾಗೂ ರಾತ್ರಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>