<p><strong>ಹಟ್ಟಿ ಚಿನ್ನದ ಗಣಿ:</strong> ಪಟ್ಟಣದ ಹಳೇ ಗ್ರಾಮ ಪಂಚಾಯಿತಿ ಕಟ್ಟಡವಿದ್ದ ಜಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡು 12 ವರ್ಷಗಳು ಕಳೆದಿವೆ. ಆದರೆ ಈವರೆಗೂ ಸಂಬಂಧಿಸಿದವರು ಕ್ರಮಕೈಗೊಂಡಿಲ್ಲ.</p>.<p>ಉದ್ಯೋಗ ಖಾತ್ರಿ ಯೋಜನೆಯಲ್ಲಿ ₹ 78 ಲಕ್ಷ ವೆಚ್ಚದಲ್ಲಿ ಸೇವಾ ಕೇಂದ್ರ ನಿರ್ಮಾಣಕ್ಕೆ 2011ರಲ್ಲಿ ಚಾಲನೆ ನೀಡಲಾಗಿತ್ತು. ಸೇವಾ ಕೇಂದ್ರದ ಕಟ್ಟಡ ಕಾಮಗಾರಿ 6 ತಿಂಗಳವರೆಗೆ ನಡೆದು ಬಾಗಿಲು ಹಂತದವರೆಗೂ ಬಂದು ನಿಂತಿದೆ. ಆದರೆ ಈವರೆಗೂ ಪೂರ್ಣಗೊಂಡಿಲ್ಲ.</p>.<p>ಹಿಂದೆ ₹ 6 ಲಕ್ಷ ವೆಚ್ಚ ಮಾಡಲಾಗಿದೆ. 2012-13ನೇ ಸಾಲಿನ ಖಾತ್ರಿ ಕ್ರಿಯಾಯೋಜನೆಯಲ್ಲಿ ₹ 3 ಲಕ್ಷ ಮೀಸಲಿಡಲಾಗಿತ್ತು. ಆದರೆ, ಈ ಮೊತ್ತ ಸಾಕಾಗುವುದಿಲ್ಲ ಎಂದು ಬಳಸಿಕೊಳ್ಳಲಿಲ್ಲ. ಹೀಗಾಗಿ ಕಾಮಗಾರಿ ನಡೆದಿಲ್ಲ. 2013-14ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಸೇವಾ ಕೇಂದ್ರದ ಉಳಿದ ಕಾಮಗಾರಿಗೆ ₹ 12 ಲಕ್ಷ ಮೊತ್ತವನ್ನು ಕ್ರಿಯಾಯೋಜನೆಯಲ್ಲಿ ಸೇರಿಸುವ ಪ್ರಯತ್ನವನ್ನು ಗ್ರಾಮ ಪಂಚಾಯಿತಿ ಆಡಳಿತ ಮಾಡಿತ್ತು. ಆದರೆ, ಅದು ಸಾಧ್ಯವಾಗದೆ ಕಾಮಗಾರಿ ಹಾಗೆ ಉಳಿದಿದೆ.</p>.<p>2014-15 ಸಾಲಿನಲ್ಲಿ ₹ 6 ಲಕ್ಷ ಮೊತ್ತವನ್ನು ಸೇವಾ ಕೇಂದ್ರದ ಕಾಮಗಾರಿಗಾಗಿ ಖಾತ್ರಿ ಕ್ರಿಯಾಯೋಜನೆಯಲ್ಲಿ ಸೇರಿಸಲಾಗಿತ್ತು. ಗ್ರಾಮ ಪಂಚಾಯಿತಿ ಆಡಳಿತದ ನಿರಾಸಕ್ತಿಯಿಂದ ಹಣ ದೊರಕದೆ, ಕಾಮಗಾರಿ ಆಗಲಿಲ್ಲ. ಪ್ರತಿ ವರ್ಷ ಉದ್ಯೋಗ ಖಾತ್ರಿ ಯೋಜನೆ ಕ್ರಿಯಾಯೋಜನೆಯಲ್ಲಿ ಸೇರಿಸಿದರೂ ಮಂಜೂರಾತಿ ದೊರೆಯದೆ ಕಾಮಗಾರಿ ನನೆಗುದಿಗೆ ಬೀಳಲು ಕಾರಣವಾಗಿದೆ.</p>.<p>ಹಟ್ಟಿ ಪಟ್ಟಣವು ಗ್ರಾ.ಪಂನಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿದೆ. ಉದ್ಯೋಗ ಖಾತ್ರಿ ಯೋಜನೆ ಪಟ್ಟಣ ಪಂಚಾಯಿತಿಗೆ ಲಭ್ಯವಾಗುವುದಿಲ್ಲ. ಜನರಿಗೆ ಉಪಯೋಗ ಆಗಬೇಕಿದ್ದ ಸೇವಾ ಕೇಂದ್ರ ಕಟ್ಟಡ ಪಾಳು ಬಿದ್ದಿದೆ ಎಂದು ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಸೇವಾ ಕೇಂದ್ರದ ಕಾಮಗಾರಿ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಪಂಚಾಯಿತಿಗೆ ಪಟ್ಟಣ ಬರುವ ಅನುದಾನದಲ್ಲಿ ಈ ಕಟ್ಟಡವನ್ನು ಪೂರ್ಣಗೊಳಿಸಬೇಕಾಗಿದೆ.</p>.<p>ಮಳೆ, ಗಾಳಿ, ಚಳಿಗೆ ಕಟ್ಟಡಕ್ಕೆ ಬಳಸಿದ ಸಿಮೇಂಟ್ ಉದುರುತ್ತಿದೆ. ಬಾಗಿಲು, ಕಿಟಕಿಗಳನ್ನು ಹುಳು ತಿಂದ್ದು, ಕಬ್ಬಿಣದ ಸರಳುಗಳು ಮಾತ್ರ ಉಳಿದಿವೆ. ಕಟ್ಟಡ ಕುಸಿಯುವ ಮುನ್ನ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><blockquote>ಸೇವಾ ಕೇಂದ್ರಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕ್ರಮಕ್ಕೆ ಮುಂದಾಗಲಾಗುವುದು </blockquote><span class="attribution">ಜಗನಾಥ ಜೋಷಿ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ</span></div>.<div><blockquote>ಸಾರ್ವಜನಿಕರಿಗೆ ಉಪಯೋಗ ಆಗಬೇಕಿದ್ದ ಸೇವಾ ಕೇಂದ್ರ ಪಾಳು ಬಿದ್ದಿದೆ. ಸಂಬಂದಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಲಿ</blockquote><span class="attribution"> ಲಾಲು ಪೀರ್ ಸಮಾಜ ಸೇವಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಪಟ್ಟಣದ ಹಳೇ ಗ್ರಾಮ ಪಂಚಾಯಿತಿ ಕಟ್ಟಡವಿದ್ದ ಜಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ರಾಜೀವಗಾಂಧಿ ಸೇವಾ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡು 12 ವರ್ಷಗಳು ಕಳೆದಿವೆ. ಆದರೆ ಈವರೆಗೂ ಸಂಬಂಧಿಸಿದವರು ಕ್ರಮಕೈಗೊಂಡಿಲ್ಲ.</p>.<p>ಉದ್ಯೋಗ ಖಾತ್ರಿ ಯೋಜನೆಯಲ್ಲಿ ₹ 78 ಲಕ್ಷ ವೆಚ್ಚದಲ್ಲಿ ಸೇವಾ ಕೇಂದ್ರ ನಿರ್ಮಾಣಕ್ಕೆ 2011ರಲ್ಲಿ ಚಾಲನೆ ನೀಡಲಾಗಿತ್ತು. ಸೇವಾ ಕೇಂದ್ರದ ಕಟ್ಟಡ ಕಾಮಗಾರಿ 6 ತಿಂಗಳವರೆಗೆ ನಡೆದು ಬಾಗಿಲು ಹಂತದವರೆಗೂ ಬಂದು ನಿಂತಿದೆ. ಆದರೆ ಈವರೆಗೂ ಪೂರ್ಣಗೊಂಡಿಲ್ಲ.</p>.<p>ಹಿಂದೆ ₹ 6 ಲಕ್ಷ ವೆಚ್ಚ ಮಾಡಲಾಗಿದೆ. 2012-13ನೇ ಸಾಲಿನ ಖಾತ್ರಿ ಕ್ರಿಯಾಯೋಜನೆಯಲ್ಲಿ ₹ 3 ಲಕ್ಷ ಮೀಸಲಿಡಲಾಗಿತ್ತು. ಆದರೆ, ಈ ಮೊತ್ತ ಸಾಕಾಗುವುದಿಲ್ಲ ಎಂದು ಬಳಸಿಕೊಳ್ಳಲಿಲ್ಲ. ಹೀಗಾಗಿ ಕಾಮಗಾರಿ ನಡೆದಿಲ್ಲ. 2013-14ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಸೇವಾ ಕೇಂದ್ರದ ಉಳಿದ ಕಾಮಗಾರಿಗೆ ₹ 12 ಲಕ್ಷ ಮೊತ್ತವನ್ನು ಕ್ರಿಯಾಯೋಜನೆಯಲ್ಲಿ ಸೇರಿಸುವ ಪ್ರಯತ್ನವನ್ನು ಗ್ರಾಮ ಪಂಚಾಯಿತಿ ಆಡಳಿತ ಮಾಡಿತ್ತು. ಆದರೆ, ಅದು ಸಾಧ್ಯವಾಗದೆ ಕಾಮಗಾರಿ ಹಾಗೆ ಉಳಿದಿದೆ.</p>.<p>2014-15 ಸಾಲಿನಲ್ಲಿ ₹ 6 ಲಕ್ಷ ಮೊತ್ತವನ್ನು ಸೇವಾ ಕೇಂದ್ರದ ಕಾಮಗಾರಿಗಾಗಿ ಖಾತ್ರಿ ಕ್ರಿಯಾಯೋಜನೆಯಲ್ಲಿ ಸೇರಿಸಲಾಗಿತ್ತು. ಗ್ರಾಮ ಪಂಚಾಯಿತಿ ಆಡಳಿತದ ನಿರಾಸಕ್ತಿಯಿಂದ ಹಣ ದೊರಕದೆ, ಕಾಮಗಾರಿ ಆಗಲಿಲ್ಲ. ಪ್ರತಿ ವರ್ಷ ಉದ್ಯೋಗ ಖಾತ್ರಿ ಯೋಜನೆ ಕ್ರಿಯಾಯೋಜನೆಯಲ್ಲಿ ಸೇರಿಸಿದರೂ ಮಂಜೂರಾತಿ ದೊರೆಯದೆ ಕಾಮಗಾರಿ ನನೆಗುದಿಗೆ ಬೀಳಲು ಕಾರಣವಾಗಿದೆ.</p>.<p>ಹಟ್ಟಿ ಪಟ್ಟಣವು ಗ್ರಾ.ಪಂನಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿದೆ. ಉದ್ಯೋಗ ಖಾತ್ರಿ ಯೋಜನೆ ಪಟ್ಟಣ ಪಂಚಾಯಿತಿಗೆ ಲಭ್ಯವಾಗುವುದಿಲ್ಲ. ಜನರಿಗೆ ಉಪಯೋಗ ಆಗಬೇಕಿದ್ದ ಸೇವಾ ಕೇಂದ್ರ ಕಟ್ಟಡ ಪಾಳು ಬಿದ್ದಿದೆ ಎಂದು ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಸೇವಾ ಕೇಂದ್ರದ ಕಾಮಗಾರಿ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಪಂಚಾಯಿತಿಗೆ ಪಟ್ಟಣ ಬರುವ ಅನುದಾನದಲ್ಲಿ ಈ ಕಟ್ಟಡವನ್ನು ಪೂರ್ಣಗೊಳಿಸಬೇಕಾಗಿದೆ.</p>.<p>ಮಳೆ, ಗಾಳಿ, ಚಳಿಗೆ ಕಟ್ಟಡಕ್ಕೆ ಬಳಸಿದ ಸಿಮೇಂಟ್ ಉದುರುತ್ತಿದೆ. ಬಾಗಿಲು, ಕಿಟಕಿಗಳನ್ನು ಹುಳು ತಿಂದ್ದು, ಕಬ್ಬಿಣದ ಸರಳುಗಳು ಮಾತ್ರ ಉಳಿದಿವೆ. ಕಟ್ಟಡ ಕುಸಿಯುವ ಮುನ್ನ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><blockquote>ಸೇವಾ ಕೇಂದ್ರಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಕ್ರಮಕ್ಕೆ ಮುಂದಾಗಲಾಗುವುದು </blockquote><span class="attribution">ಜಗನಾಥ ಜೋಷಿ ಮುಖ್ಯಾಧಿಕಾರಿ ಪಟ್ಟಣ ಪಂಚಾಯಿತಿ</span></div>.<div><blockquote>ಸಾರ್ವಜನಿಕರಿಗೆ ಉಪಯೋಗ ಆಗಬೇಕಿದ್ದ ಸೇವಾ ಕೇಂದ್ರ ಪಾಳು ಬಿದ್ದಿದೆ. ಸಂಬಂದಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಲಿ</blockquote><span class="attribution"> ಲಾಲು ಪೀರ್ ಸಮಾಜ ಸೇವಕ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>