ಶ್ರೇಷ್ಠ ಪ್ರಾಧ್ಯಾಪಕಿ ಎನ್ನುವ ಗೌರವಕ್ಕೆ ಪಾತ್ರರಾಗಿದ್ದ ಅವರು ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಲ್ಲಿ 400 ಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದಾರೆ. ಸದ್ಯಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯದ ದಾಸಸಾಹಿತ್ಯ ಪೀಠದ ಸದಸ್ಯೆ, ಭಾರತ ವಿಕಾಸ ಪರಿಷತ್ ಸದಸ್ಯೆ, ರಾಯಚೂರಿನ ಶೃತಿಸಾಹಿತ್ಯ ಮೇಳದ ಗೌರವಾಧ್ಯಕ್ಷೆ, ದಾಸ ಸಾಹಿತ್ಯ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಜೊತೆಗೆ ಮಂತ್ರಾಲಯ ಹಾಗೂ ತಿರುಪತಿ ದಾಸ ಸಾಹಿತ್ಯ ಭಜನಾ ಮಂಡಳಿಗಳೊಂದಿಗೆ ಒಡನಾಟವಿದೆ. ರಾಯಚೂರು ಜಿಲ್ಲಾ ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಮಹಿಳಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯೂ ಆಗಿದ್ದರು.