<p><strong>ಲಿಂಗಸುಗೂರು</strong>: ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಬಳಿ ಕಾರೊಂದು ಬುಧವಾರ ಬೆಳಿಗ್ಗೆ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ತೀವ್ರಗಾಯಗೊಂಡಿದ್ದಾರೆ.</p>.<p>ಗುರುಗುಂಟ ಕಡೆ ಹೊರಟಿದ್ದ ಕಾರು ಲಿಂಗಸುಗೂರು ಕಡೆಗೆ ಬರುತ್ತಿದ್ದ ಬೈಕ್ಗಳಿಗೆ ಒಂದರ ನಂತರ ಒಂದಕ್ಕೆ ಡಿಕ್ಕಿ ಹೊಡೆದಿದ್ದರಿಂದ ಹುಲಗಪ್ಪ ಹನುಮಂತ (34) ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ.</p>.<p>ಭೀಮಣ್ಣ ಬಂಗಾರೆಪ್ಪ (40), ಶಿವಪ್ಪ ಸರ್ಜಪ್ಪ (40), ಶರಣಪ್ಪ ಸರ್ಜಪ್ಪ (37) ತೀವ್ರಗಾಯಗೊಂಡಿದ್ದರು. ಭೀಮಣ್ಣ ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ಗೆ ಸೇರಿಸಲಾಗಿದೆ.</p>.<p><strong>ತಪ್ಪಿಸಿಕೊಳ್ಳಲು ಯತ್ನ:</strong> ಹೊನ್ನಳ್ಳಿ ಬಳಿ ಬೈಕ್ಗಳಿಗೆ ಡಿಕ್ಕಿ ಹೊಡೆದ ಕಾರು ಚಾಲಕ ಮರಳಿ ಲಿಂಗಸುಗೂರು ಕಡೆಗೆ ವೇಗವಾಗಿ ಚಲಾಯಿಸಿಕೊಂಡು ತಪ್ಪಿಸಿಕೊಳ್ಳುವ ಯತ್ನ ನಡೆಸಿದಾಗ ಯುವಕರ ಗುಂಪು ಫಾಲೊ ಮಾಡಿ ಪೊಲೀಶ ವಶಕ್ಕೆ ನೀಡಿದರು.</p>.<p>ಡಿವೈಎಸ್ಪಿ ದತ್ತಾತ್ರೆಯ ಕಾರ್ನಾಡ್, ಪೊಲೀಸ್ ಇನ್ಸ್ಪೆಕ್ಟರ್ ಪುಂಡಲಿಕ್ ಪಟತ್ತರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಬಳಿ ಕಾರೊಂದು ಬುಧವಾರ ಬೆಳಿಗ್ಗೆ ಎರಡು ಬೈಕ್ಗಳಿಗೆ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೂವರು ತೀವ್ರಗಾಯಗೊಂಡಿದ್ದಾರೆ.</p>.<p>ಗುರುಗುಂಟ ಕಡೆ ಹೊರಟಿದ್ದ ಕಾರು ಲಿಂಗಸುಗೂರು ಕಡೆಗೆ ಬರುತ್ತಿದ್ದ ಬೈಕ್ಗಳಿಗೆ ಒಂದರ ನಂತರ ಒಂದಕ್ಕೆ ಡಿಕ್ಕಿ ಹೊಡೆದಿದ್ದರಿಂದ ಹುಲಗಪ್ಪ ಹನುಮಂತ (34) ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ.</p>.<p>ಭೀಮಣ್ಣ ಬಂಗಾರೆಪ್ಪ (40), ಶಿವಪ್ಪ ಸರ್ಜಪ್ಪ (40), ಶರಣಪ್ಪ ಸರ್ಜಪ್ಪ (37) ತೀವ್ರಗಾಯಗೊಂಡಿದ್ದರು. ಭೀಮಣ್ಣ ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ಗೆ ಸೇರಿಸಲಾಗಿದೆ.</p>.<p><strong>ತಪ್ಪಿಸಿಕೊಳ್ಳಲು ಯತ್ನ:</strong> ಹೊನ್ನಳ್ಳಿ ಬಳಿ ಬೈಕ್ಗಳಿಗೆ ಡಿಕ್ಕಿ ಹೊಡೆದ ಕಾರು ಚಾಲಕ ಮರಳಿ ಲಿಂಗಸುಗೂರು ಕಡೆಗೆ ವೇಗವಾಗಿ ಚಲಾಯಿಸಿಕೊಂಡು ತಪ್ಪಿಸಿಕೊಳ್ಳುವ ಯತ್ನ ನಡೆಸಿದಾಗ ಯುವಕರ ಗುಂಪು ಫಾಲೊ ಮಾಡಿ ಪೊಲೀಶ ವಶಕ್ಕೆ ನೀಡಿದರು.</p>.<p>ಡಿವೈಎಸ್ಪಿ ದತ್ತಾತ್ರೆಯ ಕಾರ್ನಾಡ್, ಪೊಲೀಸ್ ಇನ್ಸ್ಪೆಕ್ಟರ್ ಪುಂಡಲಿಕ್ ಪಟತ್ತರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>