<p><strong>ಸಿಂಧನೂರು</strong>: ತಾಲ್ಲೂಕಿನ ಶ್ರೀಪುರಂ ಜಂಕ್ಷನ್ ಬಳಿಯ ಸೇತುವೆ ಮೇಲೆ ಭಾನುವಾರ ಮಧ್ಯಾಹ್ನ ಬಸ್ವೊಂದು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಗಂಗಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಹನುಮಂತ ಸೋಮಪ್ಪ ಜೋಗಿನ್(44) ಮೃತರು. ಸಿಂಧನೂರು ತಾಲ್ಲೂಕಿನ ಅಮರಾಪುರ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಅವರು ತಮ್ಮ ಊರಿಗೆ ಹೋಗಲು ಶ್ರೀಪುರಂ ಜಂಕ್ಷನ್ ಬಳಿ ಇರುವ ಸೇತುವೆ ಮೇಲೆ ನಡೆದುಕೊಂಡು ಹೊರಟ್ಟಿದ್ದರು. ಈ ವೇಳೆ, ಕೊಪ್ಪಳದಿಂದ ರಾಯಚೂರಿಗೆ ಹೊರಟಿದ್ದ ಬಸ್ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.</p>.<p>ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಮನೆಯವರೆಗೆ ಒಪ್ಪಿಸಲಾಯಿತು. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ತಾಲ್ಲೂಕಿನ ಶ್ರೀಪುರಂ ಜಂಕ್ಷನ್ ಬಳಿಯ ಸೇತುವೆ ಮೇಲೆ ಭಾನುವಾರ ಮಧ್ಯಾಹ್ನ ಬಸ್ವೊಂದು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಗಂಗಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ಹನುಮಂತ ಸೋಮಪ್ಪ ಜೋಗಿನ್(44) ಮೃತರು. ಸಿಂಧನೂರು ತಾಲ್ಲೂಕಿನ ಅಮರಾಪುರ ಗ್ರಾಮದ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಅವರು ತಮ್ಮ ಊರಿಗೆ ಹೋಗಲು ಶ್ರೀಪುರಂ ಜಂಕ್ಷನ್ ಬಳಿ ಇರುವ ಸೇತುವೆ ಮೇಲೆ ನಡೆದುಕೊಂಡು ಹೊರಟ್ಟಿದ್ದರು. ಈ ವೇಳೆ, ಕೊಪ್ಪಳದಿಂದ ರಾಯಚೂರಿಗೆ ಹೊರಟಿದ್ದ ಬಸ್ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.</p>.<p>ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಮನೆಯವರೆಗೆ ಒಪ್ಪಿಸಲಾಯಿತು. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>