<p><strong>ಕವಿತಾಳ</strong>: ಪಾತಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಚಾಣಿಯ ಸಿಮೆಂಟ್ ಮಂಗಳವಾರ ಕಳಚಿ ಬಿದ್ದ ಪರಿಣಾಮ ತರಗತಿಯಲ್ಲಿ ಕುಳಿತಿದ್ದ ಚಂದನ ಬಸವರಾಜ ಎಂಬ ಮಗುವಿನ ತಲೆಗೆ ಪೆಟ್ಟಾಗಿದೆ.</p>.<p>ಸತತ ಮಳೆಗೆ ಶಾಲೆಯ ಮೂರು ಕೊಠಡಿಗಳು ಸೋರುತ್ತಿದ್ದು ಮಕ್ಕಳು ಅಪಾಯ ಎದುರಿಸುವಂತಾಗಿದೆ ಎಂದು ಪಾಲಕರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜೀವನ್ ಸಾಬ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೊಠಡಿಗಳು ಸೋರುತ್ತಿದ್ದು ತಾತ್ಕಾಲಿಕವಾಗಿ ಗ್ರಾಮದ ಕರಿಲಿಂಗೇಶ್ವರ ದೇವಸ್ಥಾನದಲ್ಲಿ ತರಗತಿ ನಡೆಸುವಂತೆ ಸೂಚಿಸಿದರು.</p>.<p>ಈಗಾಗಲೇ ಹೆಚ್ಚುವರಿ ಕೊಠಡಿಗಳು ಮಂಜೂರಾಗಿದ್ದು ಕಾಮಗಾರಿ ಆರಂಭಿಸಬೇಕಿದೆ. ಮಳೆಗಾಲ ಮುಗಿಯುವವರಗೆ ಬೇರೆಡೆ ವ್ಯವಸ್ಥೆ ಮಾಡುವುದಾಗಿ ಅಧಿಕಾರಿ ತಿಳಿಸಿದರು.</p>.<p>’ಮಗುವಿನ ತಲೆಗೆ ಸಿಮೆಂಟ್ ಪದರು ಬಿದ್ದಿದ್ದು ಗಂಭೀರ ಗಾಯವಾಗಿಲ್ಲ’ ಎಂದು ಶಿಕ್ಷಕ ಮೋಹನ ಕುಮಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ</strong>: ಪಾತಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಚಾಣಿಯ ಸಿಮೆಂಟ್ ಮಂಗಳವಾರ ಕಳಚಿ ಬಿದ್ದ ಪರಿಣಾಮ ತರಗತಿಯಲ್ಲಿ ಕುಳಿತಿದ್ದ ಚಂದನ ಬಸವರಾಜ ಎಂಬ ಮಗುವಿನ ತಲೆಗೆ ಪೆಟ್ಟಾಗಿದೆ.</p>.<p>ಸತತ ಮಳೆಗೆ ಶಾಲೆಯ ಮೂರು ಕೊಠಡಿಗಳು ಸೋರುತ್ತಿದ್ದು ಮಕ್ಕಳು ಅಪಾಯ ಎದುರಿಸುವಂತಾಗಿದೆ ಎಂದು ಪಾಲಕರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜೀವನ್ ಸಾಬ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೊಠಡಿಗಳು ಸೋರುತ್ತಿದ್ದು ತಾತ್ಕಾಲಿಕವಾಗಿ ಗ್ರಾಮದ ಕರಿಲಿಂಗೇಶ್ವರ ದೇವಸ್ಥಾನದಲ್ಲಿ ತರಗತಿ ನಡೆಸುವಂತೆ ಸೂಚಿಸಿದರು.</p>.<p>ಈಗಾಗಲೇ ಹೆಚ್ಚುವರಿ ಕೊಠಡಿಗಳು ಮಂಜೂರಾಗಿದ್ದು ಕಾಮಗಾರಿ ಆರಂಭಿಸಬೇಕಿದೆ. ಮಳೆಗಾಲ ಮುಗಿಯುವವರಗೆ ಬೇರೆಡೆ ವ್ಯವಸ್ಥೆ ಮಾಡುವುದಾಗಿ ಅಧಿಕಾರಿ ತಿಳಿಸಿದರು.</p>.<p>’ಮಗುವಿನ ತಲೆಗೆ ಸಿಮೆಂಟ್ ಪದರು ಬಿದ್ದಿದ್ದು ಗಂಭೀರ ಗಾಯವಾಗಿಲ್ಲ’ ಎಂದು ಶಿಕ್ಷಕ ಮೋಹನ ಕುಮಾರ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>