ಆಂಧ್ರದ ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಸೂಚನೆಗಳನ್ನು ಆಧರಿಸಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಆಂಧ್ರ ಪ್ರದೇಶ ರಾಜ್ಯದಲ್ಲಿ ಕೊರೊನಾ ಉಪದೃವ ಅಷ್ಟೊಂದಿಲ್ಲ. ಹೀಗಾಗಿ ಆಗಸ್ಟ್ 21 ರಿಂದ ಸಪ್ತರಾತ್ರೋತ್ಸವ ಕಾರ್ಯಕ್ರಮಗಳು ಆರಂಭವಾಗಲಿವೆ. ಮಹೋತ್ಸವದಲ್ಲಿ ಪಾಲ್ಗೊಳ್ಳುವ ಪ್ರತಿ ಭಕ್ತರಿಗೂ ಸ್ಯಾನಿಟೈಜ್ ಮಾಡಲು ಟನಲ್ಗಳನ್ನು ಮಾಡಲಾಗುತ್ತಿದೆ. ಕೋವಿಡ್ ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡುವ ಯಂತ್ರ ಅಳವಡಿಸಲಾಗುತ್ತದೆ. ಮಠ, ನದಿತೀರ, ಶೌಚಾಲಯ ಸೇರಿದಂತೆ ಎಲ್ಲ ಕಡೆಗೂ ಸ್ಯಾನಿಟೈಜ್ ಮಾಡಲಾಗುತ್ತಿದೆ ಎಂದು ತಿಳಿಸಿದರು.