2013ರಲ್ಲಿ ಎಚ್.ಕೆ.ಪಾಟೀಲ ಅವರನ್ನು ನೇಮಿಸಿರುವುದಕ್ಕೆ ಈ ಭಾಗದಲ್ಲಿ ವಿರೋಧ ವ್ಯಕ್ತವಾಗಿತ್ತು. ಆನಂತರ ಎಚ್.ಡಿ.ಕುಮಾರಸ್ವಾಮಿ ಅವಧಿಯಲ್ಲಿ ಪ್ರಿಯಾಂಕ ಖರ್ಗೆ ಅವರನ್ನು ನೇಮಿಸಲಾಗಿತ್ತು. ಈ ಭಾಗದ ಉಸ್ತುವಾರಿ ಸಚಿವರು ಹಾಗೂ ಕಾನೂನು ಸಚಿವರನ್ನು ಸದಸ್ಯರನ್ನಾಗಿ ನೇಮಿಸಲಾಗಿತ್ತು. ಆದರೆ, ಈಗಿನ ಸರ್ಕಾರ ರಾಯಚೂರು ಹಾಗೂ ಬೀದರ್ ಉಸ್ತುವಾರಿ ಸಚಿವರನ್ನು ಸದಸ್ಯರನ್ನಾಗಿ ನೇಮಿಸಿ, ಬಳ್ಳಾರಿ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನೇಮಿಸದಿರುವುದು ಮತ್ತು ಈ ಭಾಗಕ್ಕೆ ಸಂಬಂಧವಿಲ್ಲದಿರುವ ಉತ್ತರ ಕನ್ನಡ ಉಸ್ತುವಾರಿ ಶಶಿಕಲಾ ಜೋಲ್ಲೆ ಅವರನ್ನು ನೇಮಿಸುವ ಮೂಲಕ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.