ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ಎಲ್ಲ ಸಚಿವರು, 12 ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಒಬ್ಬ ಸಂಸದರು, ಒಬ್ಬರು ಜಿಲ್ಲಾ ಪಂಚಾಯಿತಿ ಸದಸ್ಯ, ನಗರ ಸ್ಥಳೀಯ ಸಂಸ್ಥೆ ಅಧ್ಯಕ್ಷ, ಐವರು ವಿಷಯ ಪರಿಣಿತರು ಮಂಡಳಿಗೆ ಸದಸ್ಯರಾಗಿ ನಾಮನಿರ್ದೇಶನ ಮಾಡಬೇಕಿತ್ತು. ಇದುವರೆಗೂ ಕ್ರಮವಾಗಿಲ್ಲ ಎಂದರು.