<p>ರಾಯಚೂರು: ‘ಓದುವುದು ಜೀವನದ ಮುಖ್ಯ ಉದ್ದೇಶವಾಗಬೇಕು. ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಹೇಳಿದರು.</p>.<p>ಗ್ರಂಥಪಾಲಕರ ದಿನಾಚರಣೆ ಹಾಗೂ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ನಿಮಿತ್ತ ನಗರದ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗುರುವಾರ ಏರ್ಪಡಿಸಿದ್ದ ‘ರಾಯಚೂರಿನಲ್ಲಿ ಸ್ವಾತಂತ್ರ್ಯ ಹೋರಾಟದ ದಿನಗಳು ಹಾಗೂ ಪುಸ್ತಕ ಪ್ರದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಯಚೂರು ಸಮೃದ್ಧಿಯಾದ ಜಿಲ್ಲೆ. ಈ ಜಿಲ್ಲೆಯಿಂದ ಹಲವಾರು ಕೆ.ಎ.ಎಸ್ ಹಾಗೂ ಐ.ಎ.ಎಸ್ ಅಧಿಕಾರಿಗಳಾಗಿದ್ದಾರೆ. ಓದುವ ಗುರಿಯನ್ನು ಹೊಂದುವ ಮೂಲಕ ಜೀವನದ ದಿಕ್ಕನ್ನು ನಾವು ಗುರುತಿಸಿಕೊಳ್ಳಬೇಕಾಗಿದೆ’ ಎಂದರು.</p>.<p>‘ಜಿಲ್ಲೆಯು ಎರಡು ನದಿಗಳ ಸಮೃದ್ಧಿ ಸಂಪನ್ಮೂಲಗಳನ್ನು ಹೊಂದಿದೆ. ಇಂಥ ಜಿಲ್ಲೆಯ ಇರುವುದು ನಮ್ಮ ಅದೃಷ್ಟ. ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ವಿದ್ಯಾರ್ಥಿಗಳು ಪೂರಕವಾಗಿ ಕೆಲಸ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸ್ವಾತಂತ್ರ್ಯ ಹೋರಾಟದ ಬಗ್ಗೆ ನಾವು ಹೆಚ್ಚು ಓದುವ ಮೂಲಕ ಅಂದಿನ ದಿನಗಳನ್ನು ಮೆಲುಕು ಹಾಕುವ ಅವಶ್ಯಕತೆ ಇದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷ ಈ. ವಿನಯಕುಮಾರ್ ಮಾತನಾಡಿ, ವಿದ್ಯಾಭ್ಯಾಸ ಎನ್ನುವುದು ಕೇವಲ ಉಚಿತವಾಗಿ ಸಿಗುವುದಿಲ್ಲ. ಅದು ಪರಿಶ್ರಮದಿಂದ ಮಾತ್ರ ಸಾಧ್ಯ. ಈಗ ಸರ್ಕಾರದ ಸೌಲಭ್ಯಗಳಿದ್ದು, ಆ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮ ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರಯತ್ನ ಮಾಡಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಹೇಳಿದರು.</p>.<p>‘ನಗರ ಗ್ರಂಥಾಲಯದಲ್ಲಿ ಉತ್ತಮ ವ್ಯವಸ್ಥೆ ಇದ್ದು, ಸದುಪಯೋಗ ಪಡೆಯಬೇಕು. ಮುಂದಿನ ದಿನಗಳಲ್ಲಿ ನಗರಸಭೆಯಿಂದ ಗ್ರಂಥಾಲಯಕ್ಕೆ ಬೇಕಾದ ಸಹಾಯ ಮತ್ತು ಸಹಕಾರ ನೀಡಲು ಸಿದ್ಧ’ ಎಂದು ತಿಳಿಸಿದರು.</p>.<p>ಸ್ವಾತಂತ್ರ್ಯ ಹೋರಾಟದ ಕುರಿತು ನಿವೃತ್ತ ಪ್ರಾಧ್ಯಾಪಕ ರಾಮಣ್ಣ ಹವಳೆ ವಿಶೇಷ ಉಪನ್ಯಾಸ ನೀಡಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಡಿ.ಪಂಪಣ್ಣ, ನಗರಸಭೆ ಸದಸ್ಯ ಜಯಣ್ಣ, ಬಿ.ರಮೇಶ, ಸಾಹಿತಿ ವೀರ ಹನುಮಾನ್, ಮಲ್ಲೇಶ್ ಕೊಲಮಿ, ಸೈಯದ್ ಹಫೀಜುಲ್ಲಾ, ಭೀಮನಗೌಡ ಇಟಗಿ, ಮುಖ್ಯ ಗ್ರಂಥಾಲಯ ಅಧಿಕಾರಿ ಎಂ.ಎಸ್.ರಬಿನಾಳ ಇದ್ದರು.</p>.<p>ಶಿಕ್ಷಕ ದಂಡಪ್ಪ ಬಿರಾದರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಓದುವುದು ಜೀವನದ ಮುಖ್ಯ ಉದ್ದೇಶವಾಗಬೇಕು. ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ ಹೇಳಿದರು.</p>.<p>ಗ್ರಂಥಪಾಲಕರ ದಿನಾಚರಣೆ ಹಾಗೂ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ನಿಮಿತ್ತ ನಗರದ ಕೇಂದ್ರ ಗ್ರಂಥಾಲಯದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗುರುವಾರ ಏರ್ಪಡಿಸಿದ್ದ ‘ರಾಯಚೂರಿನಲ್ಲಿ ಸ್ವಾತಂತ್ರ್ಯ ಹೋರಾಟದ ದಿನಗಳು ಹಾಗೂ ಪುಸ್ತಕ ಪ್ರದರ್ಶನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ರಾಯಚೂರು ಸಮೃದ್ಧಿಯಾದ ಜಿಲ್ಲೆ. ಈ ಜಿಲ್ಲೆಯಿಂದ ಹಲವಾರು ಕೆ.ಎ.ಎಸ್ ಹಾಗೂ ಐ.ಎ.ಎಸ್ ಅಧಿಕಾರಿಗಳಾಗಿದ್ದಾರೆ. ಓದುವ ಗುರಿಯನ್ನು ಹೊಂದುವ ಮೂಲಕ ಜೀವನದ ದಿಕ್ಕನ್ನು ನಾವು ಗುರುತಿಸಿಕೊಳ್ಳಬೇಕಾಗಿದೆ’ ಎಂದರು.</p>.<p>‘ಜಿಲ್ಲೆಯು ಎರಡು ನದಿಗಳ ಸಮೃದ್ಧಿ ಸಂಪನ್ಮೂಲಗಳನ್ನು ಹೊಂದಿದೆ. ಇಂಥ ಜಿಲ್ಲೆಯ ಇರುವುದು ನಮ್ಮ ಅದೃಷ್ಟ. ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ವಿದ್ಯಾರ್ಥಿಗಳು ಪೂರಕವಾಗಿ ಕೆಲಸ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಸ್ವಾತಂತ್ರ್ಯ ಹೋರಾಟದ ಬಗ್ಗೆ ನಾವು ಹೆಚ್ಚು ಓದುವ ಮೂಲಕ ಅಂದಿನ ದಿನಗಳನ್ನು ಮೆಲುಕು ಹಾಕುವ ಅವಶ್ಯಕತೆ ಇದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷ ಈ. ವಿನಯಕುಮಾರ್ ಮಾತನಾಡಿ, ವಿದ್ಯಾಭ್ಯಾಸ ಎನ್ನುವುದು ಕೇವಲ ಉಚಿತವಾಗಿ ಸಿಗುವುದಿಲ್ಲ. ಅದು ಪರಿಶ್ರಮದಿಂದ ಮಾತ್ರ ಸಾಧ್ಯ. ಈಗ ಸರ್ಕಾರದ ಸೌಲಭ್ಯಗಳಿದ್ದು, ಆ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮ ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರಯತ್ನ ಮಾಡಬೇಕು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು’ ಎಂದು ಹೇಳಿದರು.</p>.<p>‘ನಗರ ಗ್ರಂಥಾಲಯದಲ್ಲಿ ಉತ್ತಮ ವ್ಯವಸ್ಥೆ ಇದ್ದು, ಸದುಪಯೋಗ ಪಡೆಯಬೇಕು. ಮುಂದಿನ ದಿನಗಳಲ್ಲಿ ನಗರಸಭೆಯಿಂದ ಗ್ರಂಥಾಲಯಕ್ಕೆ ಬೇಕಾದ ಸಹಾಯ ಮತ್ತು ಸಹಕಾರ ನೀಡಲು ಸಿದ್ಧ’ ಎಂದು ತಿಳಿಸಿದರು.</p>.<p>ಸ್ವಾತಂತ್ರ್ಯ ಹೋರಾಟದ ಕುರಿತು ನಿವೃತ್ತ ಪ್ರಾಧ್ಯಾಪಕ ರಾಮಣ್ಣ ಹವಳೆ ವಿಶೇಷ ಉಪನ್ಯಾಸ ನೀಡಿದರು.</p>.<p>ಸ್ವಾತಂತ್ರ್ಯ ಹೋರಾಟಗಾರ ಡಿ.ಪಂಪಣ್ಣ, ನಗರಸಭೆ ಸದಸ್ಯ ಜಯಣ್ಣ, ಬಿ.ರಮೇಶ, ಸಾಹಿತಿ ವೀರ ಹನುಮಾನ್, ಮಲ್ಲೇಶ್ ಕೊಲಮಿ, ಸೈಯದ್ ಹಫೀಜುಲ್ಲಾ, ಭೀಮನಗೌಡ ಇಟಗಿ, ಮುಖ್ಯ ಗ್ರಂಥಾಲಯ ಅಧಿಕಾರಿ ಎಂ.ಎಸ್.ರಬಿನಾಳ ಇದ್ದರು.</p>.<p>ಶಿಕ್ಷಕ ದಂಡಪ್ಪ ಬಿರಾದರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>