ಮುಖಂಡ ಹನುಮಂತರಾಯ ಚಿಕ್ಕಗುಡ್ಡ ಮಾತನಾಡಿ, ಅಖಂಡ ತಾಲ್ಲೂಕು ಉಳಿವಿಗಾಗಿ ಈಗಾಗಲೇ ಹಳ್ಳಿ, ಹಳ್ಳಿಗೂ ಹೋಗಿ ಜನ ಜಾಗೃತಿ ಮೂಡಿಸಲಾಗುತ್ತಿದೆ. ಸ್ಥಳೀಯ ಶಾಸಕರು ತಾಲ್ಲೂಕಿಗೆ ಸುಮಾರು 50 ಸಾವಿರ ಆಶ್ರಯ ಮನೆಗಳನ್ನು ಮಂಜೂರು ಮಾಡಿಸಿ ನಿರ್ಮಿಸಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ಇಂದಿಗೂ ಸಾವಿರಾರು ಕುಟುಂಬಗಳು ಗುಡಿಸಿಲಿನಲ್ಲಿ ಜೀವನ ಮಾಡುತ್ತಿದ್ದಾರೆ.ಎಂದು ಟೀಕಿಸಿದರು. ಗೋಸಲ್, ಜಿ.ಬಸವರಾಜ ನಾಯಕ, ಮೇಲಪ್ಪ ಬಾವಿಮನಿ, ಮಲ್ಲಯ್ಯ ಕಟ್ಟಿಮನಿ, ಗೋವಿಂದರಾಯ ಚಿಕ್ಕಗುಡ್ಡ, ಶಿವರಾಜ ನಾಯಕ, ಶಂಕರಗೌಡ ಚನ್ನೂರು, ಸಿದ್ದಲಿಂಗಪ್ಪ ಇದ್ದರು.