ತಾಲ್ಲೂಕು ಪಂಚಾಯಿತಿಯ ತ್ರೈಮಾಸಿಕ (ಕೆಡಿಪಿ) ಸಮಿತಿ, ಜಿಲ್ಲಾ ಪಂಚಾಯಿತಿ ಕೆಡಿಪಿ, ಪುರಸಭೆ, ಪಟ್ಟಣ ಪಂಚಾಯಿತಿ, ಆಶ್ರಯ, ಆರಾಧನಾ, ಜೆಸ್ಕಾಂ, ಆರೋಗ್ಯ ಇಲಾಖೆ, ನ್ಯಾಯಬೆಲೆ ಅಂಗಡಿ ಜಾಗೃತಿ ಸಮಿತಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸಮಿತಿಗಳನ್ನು ಪಟ್ಟಿ ಮಾಡಿದ್ದು ಯಾವ ಕಾರ್ಯಕರ್ತರನ್ನು ಯಾವ ಸಮಿತಿಗೆ ನೇಮಕ ಮಾಡಬೇಕು. ಆ ಕಾರ್ಯಕರ್ತರ ಪಕ್ಷ ನಿಷ್ಠೆ ಎಲ್ಲವನ್ನೂ ಗುರುತಿಸಿ ಪಕ್ಷದ ವರಿಷ್ಠರಿಗೆ ರವಾನಿಸಿದ್ದಾರೆ. ಈಗಾಗಲೇ ಪಕ್ಷದಿಂದ ಅಂತಿಮ ಪಟ್ಟಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಡಿ. 14 ರ ನಂತರ ಪಟ್ಟಿ ಪ್ರಕಟವಾಗಲಿದೆ ಎಂದು ಶಿವಪುತ್ರಪ್ಪ ಅರಳಹಳ್ಳಿ ತಿಳಿಸಿದ್ದಾರೆ.