<p><strong>ರಾಯಚೂರು</strong>: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಕಡಿಮೆಯಾಗಿರುವ ಕಾರಣ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ಆರ್ಟಿಪಿಎಸ್) ವಿದ್ಯುತ್ ಉತ್ಪಾದನೆ ತಗ್ಗಿಸಲಾಗಿದೆ. ಒಟ್ಟು ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಮುಂದುವರಿಸಲಾಗಿದೆ.</p>.<p>ಆರ್ಟಿಪಿಎಸ್ನ ಒಟ್ಟು ಎಂಟು ಘಟಕಗಳ ಪೈಕಿ, ಒಂದು ಘಟಕ ಎರಡು ವರ್ಷಗಳಿಂದ ಬಂದ್ ಇದೆ. ಇನ್ನೊಂದು ತಾಂತ್ರಿಕ ಕಾರಣದಿಂದಾಗಿ ದುರಸ್ತಿಯಲ್ಲಿದೆ. ಒಂದು ಘಟಕದಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಐದು ಘಟಕಗಳಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ.</p>.<p>ಬೇಸಿಗೆ ಕಾರಣ ಕೃಷಿಗೆ ಪಂಪ್ಸೆಟ್ ಬಳಕೆ ಕಡಿಮೆಯಾಗಿದೆ ಹಾಗೂ ಎರಡು ವಾರಗಳಿಂದ ರಾಜ್ಯದಲ್ಲಿ ಮಳೆ ಬೀಳುತ್ತಿರುವುದರಿಂದ ಕಟ್ಟಡ ನಿರ್ಮಾಣದಂತಹ ಉದ್ಯಮಕ್ಕೆ ಕಡಿಮೆ ಪ್ರಮಾಣದಲ್ಲಿ ವಿದ್ಯುತ್ ಬಳಕೆಯಾಗುತ್ತಿದೆ. ಹೀಗಾಗಿ ಸಹಜವಾಗಿಯೇ ವಿದ್ಯುತ್ ಬೇಡಿಕೆ ಕಡಿಮೆಯಾಗಿ ಉತ್ಪಾದನೆಯೂ ಇಳಿಮುಖವಾಗಿದೆ.</p>.<p>‘ಯರಮರಸ್ನ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಕೆಪಿಸಿ ಬೇಡಿಕೆಯಂತೆ ಇಲ್ಲಿ ವಿದ್ಯುತ್ ಉತ್ಪಾದಿಸಲಾಗುತ್ತದೆ. ಕಲ್ಲಿದ್ದಲಿನಿಂದ ವಿದ್ಯುತ್ ಉತ್ಪಾದನೆ ಮಾಡುವುದು ವೆಚ್ಚದಾಯಕ. ಹೀಗಾಗಿ ಮಳೆಗಾಲದಲ್ಲಿ ಜಲವಿದ್ಯುತ್ಗೆ ಆದ್ಯತೆ ನೀಡಲಾಗುತ್ತದೆ’ ಎಂದು ಆರ್ಟಿಪಿಎಸ್ನ ಕಾರ್ಯನಿರ್ವಾಹಕ ನಿರ್ದೇಶಕ ಜಯಪ್ರಕಾಶ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಕಡಿಮೆಯಾಗಿರುವ ಕಾರಣ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದಲ್ಲಿ (ಆರ್ಟಿಪಿಎಸ್) ವಿದ್ಯುತ್ ಉತ್ಪಾದನೆ ತಗ್ಗಿಸಲಾಗಿದೆ. ಒಟ್ಟು ಎಂಟು ಘಟಕಗಳ ಪೈಕಿ ಒಂದು ಘಟಕದಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಮುಂದುವರಿಸಲಾಗಿದೆ.</p>.<p>ಆರ್ಟಿಪಿಎಸ್ನ ಒಟ್ಟು ಎಂಟು ಘಟಕಗಳ ಪೈಕಿ, ಒಂದು ಘಟಕ ಎರಡು ವರ್ಷಗಳಿಂದ ಬಂದ್ ಇದೆ. ಇನ್ನೊಂದು ತಾಂತ್ರಿಕ ಕಾರಣದಿಂದಾಗಿ ದುರಸ್ತಿಯಲ್ಲಿದೆ. ಒಂದು ಘಟಕದಲ್ಲಿ ಮಾತ್ರ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಐದು ಘಟಕಗಳಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ.</p>.<p>ಬೇಸಿಗೆ ಕಾರಣ ಕೃಷಿಗೆ ಪಂಪ್ಸೆಟ್ ಬಳಕೆ ಕಡಿಮೆಯಾಗಿದೆ ಹಾಗೂ ಎರಡು ವಾರಗಳಿಂದ ರಾಜ್ಯದಲ್ಲಿ ಮಳೆ ಬೀಳುತ್ತಿರುವುದರಿಂದ ಕಟ್ಟಡ ನಿರ್ಮಾಣದಂತಹ ಉದ್ಯಮಕ್ಕೆ ಕಡಿಮೆ ಪ್ರಮಾಣದಲ್ಲಿ ವಿದ್ಯುತ್ ಬಳಕೆಯಾಗುತ್ತಿದೆ. ಹೀಗಾಗಿ ಸಹಜವಾಗಿಯೇ ವಿದ್ಯುತ್ ಬೇಡಿಕೆ ಕಡಿಮೆಯಾಗಿ ಉತ್ಪಾದನೆಯೂ ಇಳಿಮುಖವಾಗಿದೆ.</p>.<p>‘ಯರಮರಸ್ನ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಕೆಪಿಸಿ ಬೇಡಿಕೆಯಂತೆ ಇಲ್ಲಿ ವಿದ್ಯುತ್ ಉತ್ಪಾದಿಸಲಾಗುತ್ತದೆ. ಕಲ್ಲಿದ್ದಲಿನಿಂದ ವಿದ್ಯುತ್ ಉತ್ಪಾದನೆ ಮಾಡುವುದು ವೆಚ್ಚದಾಯಕ. ಹೀಗಾಗಿ ಮಳೆಗಾಲದಲ್ಲಿ ಜಲವಿದ್ಯುತ್ಗೆ ಆದ್ಯತೆ ನೀಡಲಾಗುತ್ತದೆ’ ಎಂದು ಆರ್ಟಿಪಿಎಸ್ನ ಕಾರ್ಯನಿರ್ವಾಹಕ ನಿರ್ದೇಶಕ ಜಯಪ್ರಕಾಶ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>