ಜಿಲ್ಲೆಗೆ ಸಚಿವ ಸ್ಥಾನ ವಂಚನೆ, 371ಜೆ ಅಸಮರ್ಪಕ ಜಾರಿ, ಅಭಿವೃದ್ದಿಯಲ್ಲಿ ಹಿನ್ನಡೆ, ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಅನ್ಯಾಯ, ಪ್ರಾದೇಶಿಕ ಅಸಮಾನತೆ ಸೇರಿದಂತೆ ಸಮಗ್ರ ನಿರ್ಲಕ್ಷ್ಯ ಧೋರಣೆಯ ಖಂಡಿಸಿ ಈ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇವೆ. ಐಐಟಿ ಸ್ಥಾಪನೆಗೆ ಒತ್ತಾಯಿಸಿ ಹೋರಾಟದಲ್ಲಿ ತೊಡಗಿಸಿಕೊಂಡ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನೇತೃತ್ವದಲ್ಲಿ ಬೃಹತ್ ಸಮಾವೇಶ ಮಾಡಲಾಗುವುದು ಎಂದು ಹೇಳಿದರು.