ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ವೈಫಲ್ಯತೆ ಹಾಗೂ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಜನವಿರೋಧಿ ನೀತಿಗಳನ್ನು ಮರೆಮಾಚಲು ಹಿಜಾಬ್, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಅಝಾನ್ಗೆ ವಿರೋಧ ಮಾಡಿ ಒಂದು ಧರ್ಮವನ್ನು ಗುರಿಯಾಗಿಸಿ ಕೋಮು ಪ್ರಚೋದನೆ ಮಾಡುತ್ತಿರುವುದು ದುರಂತ. ಇದನ್ನು ಜಾತ್ಯತೀತ ಮನಸುಗಳು ಖಂಡಿಸಿ, ಸಾಮಸ್ಯರ ಸಾರಬೇಕಿದೆ. ಈ ನಿಟ್ಟಿನಲ್ಲಿ ಸಿಂಧನೂರಿನಲ್ಲಿ ಬಹುತ್ವ ಭಾರತೀಯ ಭಾವೈಕ್ಯತಾ ಸಮಾವೇಶ ಏರ್ಪಡಿಸಲಾಗಿದೆ ಎಂದು ಹೇಳಿದರು.ಒಕ್ಕೂಟದ ಸಂಚಾಲಕ ಎಂ.ಗಂಗಾಧರ್, ಆರ್.ಬೋನ್ವೆಂಚರ್, ನಾರಾಯಣ ಬೆಳಗುರ್ಕಿ, ಕೆ.ಮರಿಯಪ್ಪ, ಅಲ್ಲಮಪ್ರಭು ಪೂಜಾರ್, ನರಸಪ್ಪ ಕಟ್ಟಿಮನಿ, ವಿಜಯಕುಮಾರ ಇದ್ದರು.