ರಾಯಚೂರು: ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಆನಂತರ ಮಾತನಾಡಿದ ಅವರು, ಸಂವಿಧಾನ ಜಾರಿಗೊಳಿಸಿದ ಈ ದಿನವು ದೇಶದ ಎಲ್ಲ ನಾಗರಿಕರಿಗೂ ವಿಶೇಷವಾಗಿದೆ. ಸಂವಿಧಾನದಡಿ ಪ್ರಜಾತಂತ್ರ ವ್ಯವಸ್ಥೆ ಬಲಿಷ್ಠವಾಗಿದೆ ಎಂದರು.
ಪೊಲೀಸ್ ತಂಡದವರು, ಅಗ್ನಶಾಮಕ ತಂಡದವರು, ಎನ್ಎಸ್ಎಸ್ ಸೇರಿದಂತೆ ಅನೇಕ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.
ವಿಧಾನ ಪರಿಷತ್ ನೂತನ ಸಭಾಪತಿ ಬಸವರಾಜ ಎಸ್.ಹೊರಟ್ಟಿ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಂತ್ರಾಲಯದಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ರಾಯಚೂರಿನಲ್ಲಿ ವಾಸ್ತವ್ಯ ಉಳಿದಿದ್ದರು.