ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಧ್ವಜಾರೋಹಣ ನೆರವೇರಿಸಿದ ಸಚಿವ ಶಂಕರ ಪಾಟೀಲ

Last Updated 26 ಜನವರಿ 2023, 4:35 IST
ಅಕ್ಷರ ಗಾತ್ರ

ರಾಯಚೂರು: ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಆನಂತರ ಮಾತನಾಡಿದ ‌ಅವರು, ಸಂವಿಧಾನ ಜಾರಿಗೊಳಿಸಿದ ಈ ದಿನವು ದೇಶದ ಎಲ್ಲ ನಾಗರಿಕರಿಗೂ ವಿಶೇಷವಾಗಿದೆ. ಸಂವಿಧಾನದಡಿ ಪ್ರಜಾತಂತ್ರ ವ್ಯವಸ್ಥೆ ಬಲಿಷ್ಠವಾಗಿದೆ ಎಂದರು.

ಪೊಲೀಸ್ ತಂಡದವರು, ಅಗ್ನಶಾಮಕ ತಂಡದವರು, ಎನ್‌ಎಸ್‌ಎಸ್ ಸೇರಿದಂತೆ ಅನೇಕ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ವಿಧಾನ ಪರಿಷತ್ ನೂತನ ಸಭಾಪತಿ ಬಸವರಾಜ ಎಸ್.ಹೊರಟ್ಟಿ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಂತ್ರಾಲಯದಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ್ದ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ರಾಯಚೂರಿನಲ್ಲಿ ವಾಸ್ತವ್ಯ ಉಳಿದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT