<p><strong>ಮಾನ್ವಿ:</strong> ‘ಪಟ್ಟಣದಲ್ಲಿ ರಸ್ತೆ ಜಾಗ ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದ್ದು, ಒತ್ತುವರಿ ತೆರವುಗೊಳಿಸಬೇಕು’ ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ತಹಶೀಲ್ದಾರ್ ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪಟ್ಟಣದ ಯರಮಲದೊಡ್ಡಿ ರಸ್ತೆಯ ಸರ್ವೆ ನಂ.127/3ರಲ್ಲಿ 1 ಎಕರೆ 12 ಗುಂಟೆ ಜಮೀನಿನಲ್ಲಿ ಸಾರ್ವಜನಿಕ ರಸ್ತೆಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿ, ಕಟ್ಟಡ ನಿರ್ಮಾಣ ಮಾಡಲಾಗಿದೆ. ಸದರಿ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವಸತಿ ಶಾಲೆಗೆ ಬಾಡಿಗೆ ನೀಡಲಾಗಿದೆ. ಈ ಕಟ್ಟಡದ ಮುಂಭಾಗದಿಂದ ಹಜರತ್ ಸೈಯದ್ ತಾಜುದ್ದೀನ್ ಬಾಬಾ ಮತ್ತು ಹಜರತ್ ಸೈಯದ್ ಸಿರಾಜುದ್ದೀನ್ ಬಾಬಾ ದರ್ಗಾಕ್ಕೆ ತೆರಳುವ ರಸ್ತೆಯನ್ನು ಒತ್ತುವರಿ ಮಾಡಲಾಗಿದೆ. ಈ ಕುರಿತು ಪರಿಶೀಲನೆ ನಡೆಸಿ, ನಿಯಮಬಾಹಿರವಾಗಿ ರಸ್ತೆಯ ಅತಿಕ್ರಮಣ ಹಾಗೂ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>ಶಿರಸ್ತೇದಾರ್ ವಿನಾಯಕರಾವ್ ಮನವಿ ಪತ್ರ ಸ್ವೀಕರಿಸಿದರು. ಸಾಮಾಜಿಕ ಕಾರ್ಯಕರ್ತ ಜಾವೀದ್ ಖಾನ್, ನರಸಪ್ಪ ಜೂಕೂರು, ಸೈಯದ್ ಮುಷ್ತಾಕ್ ಖಾದ್ರಿ, ಸೈಯದ್ ಮುದಾಸ್ಸಿರ್ ಹುಸೇನಿ, ಸಮೀರ್ ಪಾಷಾ, ಅಮ್ಜದ್ ಖಾನ್, ಬಾಷಾ ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ:</strong> ‘ಪಟ್ಟಣದಲ್ಲಿ ರಸ್ತೆ ಜಾಗ ಅತಿಕ್ರಮಿಸಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದ್ದು, ಒತ್ತುವರಿ ತೆರವುಗೊಳಿಸಬೇಕು’ ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ತಹಶೀಲ್ದಾರ್ ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಪಟ್ಟಣದ ಯರಮಲದೊಡ್ಡಿ ರಸ್ತೆಯ ಸರ್ವೆ ನಂ.127/3ರಲ್ಲಿ 1 ಎಕರೆ 12 ಗುಂಟೆ ಜಮೀನಿನಲ್ಲಿ ಸಾರ್ವಜನಿಕ ರಸ್ತೆಯನ್ನು ಅಕ್ರಮವಾಗಿ ಅತಿಕ್ರಮಣ ಮಾಡಿ, ಕಟ್ಟಡ ನಿರ್ಮಾಣ ಮಾಡಲಾಗಿದೆ. ಸದರಿ ಕಟ್ಟಡವನ್ನು ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವಸತಿ ಶಾಲೆಗೆ ಬಾಡಿಗೆ ನೀಡಲಾಗಿದೆ. ಈ ಕಟ್ಟಡದ ಮುಂಭಾಗದಿಂದ ಹಜರತ್ ಸೈಯದ್ ತಾಜುದ್ದೀನ್ ಬಾಬಾ ಮತ್ತು ಹಜರತ್ ಸೈಯದ್ ಸಿರಾಜುದ್ದೀನ್ ಬಾಬಾ ದರ್ಗಾಕ್ಕೆ ತೆರಳುವ ರಸ್ತೆಯನ್ನು ಒತ್ತುವರಿ ಮಾಡಲಾಗಿದೆ. ಈ ಕುರಿತು ಪರಿಶೀಲನೆ ನಡೆಸಿ, ನಿಯಮಬಾಹಿರವಾಗಿ ರಸ್ತೆಯ ಅತಿಕ್ರಮಣ ಹಾಗೂ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡವನ್ನು ತೆರವುಗೊಳಿಸಬೇಕು’ ಎಂದು ಒತ್ತಾಯಿಸಿದರು.</p>.<p>ಶಿರಸ್ತೇದಾರ್ ವಿನಾಯಕರಾವ್ ಮನವಿ ಪತ್ರ ಸ್ವೀಕರಿಸಿದರು. ಸಾಮಾಜಿಕ ಕಾರ್ಯಕರ್ತ ಜಾವೀದ್ ಖಾನ್, ನರಸಪ್ಪ ಜೂಕೂರು, ಸೈಯದ್ ಮುಷ್ತಾಕ್ ಖಾದ್ರಿ, ಸೈಯದ್ ಮುದಾಸ್ಸಿರ್ ಹುಸೇನಿ, ಸಮೀರ್ ಪಾಷಾ, ಅಮ್ಜದ್ ಖಾನ್, ಬಾಷಾ ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>