ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ನಿಯಮ ತಿದ್ದುಪಡಿಗೆ ಆಗ್ರಹ

Last Updated 5 ಸೆಪ್ಟೆಂಬರ್ 2021, 11:47 IST
ಅಕ್ಷರ ಗಾತ್ರ

ಲಿಂಗಸುಗೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ ಹೊಂದಿದ್ದಾರೆ. ಅಂತಹ ಶಿಕ್ಷಕರು ಸ್ವಂತ ಜಿಲ್ಲೆಗಳಿಗೆ ವರ್ಗಾವಣೆ ಮಾಡಿಕೊಳ್ಳಲು ಅನುಕೂಲ ಆಗುವ ರೀತಿಯಲ್ಲಿ ವರ್ಗಾವಣೆ ನಿಯಮಗಳ ತಿದ್ದುಪಡಿ ಮಾಡಬೇಕು ಎಂದು ಶಿಕ್ಷಕರು ಆಗ್ರಹಪಡಿಸಿದರು.

ಭಾನುವಾರ ಉಪ ವಿಭಾಗಾಧಿಕಾರಿ ರಾಹುಲ್‍ ಸಂಕನೂರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ ಅವರು, ಈಗಾಗಲೆ 20 ವರ್ಷಕ್ಕೂ ಮೇಲ್ಪಟ್ಟು ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸುತ್ತ ಬಂದಿದ್ದೇವೆ. ವಯೋವೃದ್ಧ ತಂದೆ ತಾಯಿ, ಸಂಬಂಧಿಕರ ಆರೋಗ್ಯ ಸಂರಕ್ಷಣೆ ಉದ್ದೇಶದಿಂದ ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡಿಕೊಳ್ಳಲಾಗದೆ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ದೂರಿದರು.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ ಕಲಂ 370(ಜೆ) ಅನುಷ್ಠಾನಗೊಳಿಸಿದ್ದರು ಕೂಡ ನೂರಾರು ಹುದ್ದೆಗಳು ಭರ್ತಿ ಆಗದೆ ಖಾಲಿ ಉಳಿದಿವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಬೇಕು. ಶಿಕ್ಷಕರ ನೇಮಕಾತಿ, ವರ್ಗಾವಣೆ ಮಾಡದೆ ಗುಣಮಟ್ಟದ ಶಿಕ್ಷಣ ನಿರೀಕ್ಷಿಸುವುದು ನ್ಯಾಯಸಮ್ಮತವಲ್ಲ ಎಂದರು.

ಶಿಕ್ಷಕ ಸಮೂಹದ ಮುಖಂಡರಾದ ಜಗದೀಶ, ಗಿರಿಮಲ್ಲಯ್ಯ ಮಠ, ಮೈಲಾರೆಪ್ಪ, ಗಿರೀಶ, ಶಾಂತೇಶ ವಗ್ಗರ, ನಾಗಭೂಷಣ, ಪ್ರವೀಣ ಪಾಟೀಲ, ಹನುಮಂತಪ್ಪ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT