<p><strong>ರಾಯಚೂರು:</strong> ‘ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹೆಸರು ನೋಂದಾಯಿಕೊಂಡು ಪರೀಕ್ಷೆಗೆ ಹಾಜರಾಗಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ಟೂರು ಬಸಪ್ಪ ಮನವಿ ಮಾಡಿದರು.</p>.<p>ದ್ವಿತೀಯ ಪಿಯುಸಿ ಪರೀಕ್ಷಾ-2ಕ್ಕೆ ಅವಕಾಶ ಕಲ್ಪಿಸಿದ್ದರಿಂದ ಜಿಲ್ಲೆಯಲ್ಲಿ 6,788 ವಿದ್ಯಾರ್ಥಿಗಳ ಪೈಕಿ 1,625 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ 23.09 ಫಲಿತಾಂಶ ಬಂದಿದೆ ಎಂದು ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮೂರನೇ ಪರೀಕ್ಷೆ-3ಯನ್ನು ಜೂನ್ 9ರಿಂದ 20ರವರೆಗೆ ನಡೆಸಲಿದೆ. ಪರೀಕ್ಷೆಗೆ ಉಚಿತವಾಗಿ ಹೆಸರು ನೋಂದಣಿಗೆ ಮೇ 28ಕೊನೆಯ ದಿನವಾಗಿದೆ. ‘2025ರ ಮಾರ್ಚ್ನಲ್ಲಿ ನಡೆದ ಪರೀಕ್ಷೆ-1ಗೆ ಒಟ್ಟು 18,414 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 10,818 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಪ್ರತಿಶತ ಫಲಿತಾಂಶವು ಶೇ 58.75 ಆಗಿದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರಪ್ಪ ಹೊಕ್ರಾಣಿ, ಮಾನ್ವಿ ಸರ್ಕಾರಿ ಬಾಲಕರ ಪಿಯು ಕಾಲೇಜಿನ ಪ್ರಾಚಾರ್ಯ ಕುಂಟಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಸುಧಾ ಎಂ.ಎ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ಹೆಸರು ನೋಂದಾಯಿಕೊಂಡು ಪರೀಕ್ಷೆಗೆ ಹಾಜರಾಗಬೇಕು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೊಟ್ಟೂರು ಬಸಪ್ಪ ಮನವಿ ಮಾಡಿದರು.</p>.<p>ದ್ವಿತೀಯ ಪಿಯುಸಿ ಪರೀಕ್ಷಾ-2ಕ್ಕೆ ಅವಕಾಶ ಕಲ್ಪಿಸಿದ್ದರಿಂದ ಜಿಲ್ಲೆಯಲ್ಲಿ 6,788 ವಿದ್ಯಾರ್ಥಿಗಳ ಪೈಕಿ 1,625 ವಿದ್ಯಾರ್ಥಿಗಳು ಪಾಸಾಗಿದ್ದು, ಶೇ 23.09 ಫಲಿತಾಂಶ ಬಂದಿದೆ ಎಂದು ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಮೂರನೇ ಪರೀಕ್ಷೆ-3ಯನ್ನು ಜೂನ್ 9ರಿಂದ 20ರವರೆಗೆ ನಡೆಸಲಿದೆ. ಪರೀಕ್ಷೆಗೆ ಉಚಿತವಾಗಿ ಹೆಸರು ನೋಂದಣಿಗೆ ಮೇ 28ಕೊನೆಯ ದಿನವಾಗಿದೆ. ‘2025ರ ಮಾರ್ಚ್ನಲ್ಲಿ ನಡೆದ ಪರೀಕ್ಷೆ-1ಗೆ ಒಟ್ಟು 18,414 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 10,818 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಪ್ರತಿಶತ ಫಲಿತಾಂಶವು ಶೇ 58.75 ಆಗಿದೆ’ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರಪ್ಪ ಹೊಕ್ರಾಣಿ, ಮಾನ್ವಿ ಸರ್ಕಾರಿ ಬಾಲಕರ ಪಿಯು ಕಾಲೇಜಿನ ಪ್ರಾಚಾರ್ಯ ಕುಂಟಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಸುಧಾ ಎಂ.ಎ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>