ರಾಯಚೂರು: ಜಿಲ್ಲಾಮಟ್ಟದ ಅಂಗವಿಕಲರ ಕುಂದುಕೊರತೆ ಸಭೆಯನ್ನು ಮಾಡಬೇಕು ಎಂದು ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗೆ ಈಚೆಗೆ ಮನವಿ ಸಲ್ಲಿಸಿದರು.
ಕಳೆದ ಒಂದು ವರ್ಷದಿಂದ ಕುಂದುಕೊರತೆ ಸಭೆಯನ್ನು ವಿಕಲಚೇತನರ ಕಲ್ಯಾಣ ಇಲಾಖೆ ಅಧಿಕಾರಿ ತೆಗೆದುಕೊಂಡಿಲ್ಲ. ಮೂರು ತಿಂಗಳಿಗೊಮ್ಮೆ ಸಭೆಗಳು ನಡೆಸಬೇಕು ಎಂಬ ಸರ್ಕಾರದ ಆದೇಶವಿದ್ದರೂ, ಸಭೆ ನಿಗದಿ ಪಡಿಸುತ್ತಿಲ್ಲ. ಆದ್ದರಿಂದ, ತಾವಾದರೂ ಸಭೆ ನಡೆಸಿ ಕುಂದುಕೊರತೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.