ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಚಕರಿಗೆ ಆರ್ಥಿಕ ನೆರವು ನೀಡಲು ಒತ್ತಾಯ

Last Updated 21 ಮೇ 2020, 13:51 IST
ಅಕ್ಷರ ಗಾತ್ರ

ರಾಯಚೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವಸ್ಥಾನಗಳು ಬಂದ್ ಆಗಿರುವ ಕಾರಣ ಆರ್ಚಕರಿಗೆ ಆರ್ಥಿಕ ಸಮಸ್ಯೆ ಎದುರಾಗಿದ್ದು ಸರ್ಕಾರ ಆರ್ಥಿಕ ಸೌಲಭ್ಯ ನೀಡಬೇಕು ಎಂದು ಜಿಲ್ಲೆಯ ವಿವಿಧ ದೇವಸ್ಥಾನದ ಅರ್ಚಕರು ಜಿಲ್ಲಾಡಳಿತ ಸಿಬ್ಬಂದಿಗೆ ಗುರುವಾರ ಮನವಿ ಸಲ್ಲಿಸಿದರು.

ದೇವಸ್ಥಾನದಲ್ಲಿ ಸೇವೆ ಮಾಡುವ ನಮಗೆ ಲಾಕ್ ಡೌನ್ ನಿಂದಾಗಿ ದಿನ ನಿತ್ಯದ ಜೀವನ ನಡೆಸಲು ತೀವ್ರ ತೊಂದರೆಯಾಗಿದೆ. ಬೇರೆ ಆದಾಯ ಮೂಲವಿಲ್ಲದ ನಮಗೆ ಸರ್ಕಾರದಿಂದ ನೀಡುವ ಆರ್ಥಿಕ ಸೌಲಭ್ಯಗಳನ್ನು ನೀಡಿ ಸಂಕಷ್ಟದ ಕಾಲಕ್ಕೆ ನೆರವು ನೀಡಬೇಕು ಎಂದು ಶೀಲಾ ಕುಮಾರ ಶಾಸ್ತ್ರೀ, ದತ್ತ ದಿಗಂಬರ ಜೋಶಿ, ನಾರಾಯಣ ಭಟ್ಟ ಜೋಶಿ, ಸುಹಾಸ್, ಗೋಪಾಲ ಜೋಶಿ, ವಸಂತ ಭಟ್ ಮತ್ತಿತರರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT