<p><strong>ರಾಯಚೂರು: </strong>ಗುಲಬರ್ಗಾ ವಿಶ್ವವಿದ್ಯಾಲಯದಿಂದ ಬೇರ್ಪಡಿಸಿ ಹೊಸದಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಆರಂಭಗೊಳ್ಳಲಿರುವ ರಾಯಚೂರು ವಿಶ್ವವಿದ್ಯಾಲಯದ ಆಡಳಿತದಲ್ಲಿ ಸ್ಥಳೀಯ ಯರಗೇರಾ ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ಯರಗೇರಾದಲ್ಲಿರುವ ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ರಾಯಚೂರು ವಿಶ್ವವಿದ್ಯಾಲಯವನ್ನಾಗಿ ಸ್ಥಾಪನೆ ಮಾಡುತ್ತಿರುವುದು ಜಿಲ್ಲೆಯ ಶೈಕ್ಷಣಿಕ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ. ಈ ಕೇಂದ್ರಕ್ಕೆ 30 ವರ್ಷಗಳ ಹಿಂದೆ 250 ಎಕರೆಗೆ ಜಮೀನು ನೀಡಲಾಗಿದೆ. ಆದ್ದರಿಂದ ಹುದ್ದೆಗಳ ನೇಮಕಾತಿಯಲ್ಲಿ ಯರಗೇರಾ ಸುತ್ತಲಿನ ಯುವಕ ಯುವತಿಯರಿಗೆ ಪ್ರಾತಿನಿಧ್ಯ ನೀಡುವ ಮೂಲಕ ಸ್ಥಳೀಯರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.</p>.<p>ರಾಯಚೂರು ವಿಶ್ವವಿದ್ಯಾಲಯದಲ್ಲಿ ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ಕಾಯಂ ಹಾಗೂ ಹೊರ ಗುತ್ತಿಗೆಯ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪಂಚಾಯಿತಿ ಅಧ್ಯಕ್ಷೆ ಮಂಗಮ್ಮ, ಸದಸ್ಯರಾದ ಸುಶೀಲಮ್ಮ, ಮೊಹಮ್ಮದ್ ಅಜೀಜ್, ವೆಂಕಟೇಶ್, ಅಸ್ಮತ್ಬೇಗಂ, ಹನುಮಂತ, ಮಲ್ಲೇಶ, ಮಹಮ್ಮದ್ ರಫಿ, ಪಾರ್ವತಿ, ಮಹಾದೇವಮ್ಮ, ನರಸಿಂಹ, ನರಸಿಂಹಲು ನಾಯಕ, ಸೀಮಾನ್, ಲಕ್ಷ್ಮಿ ತಾಯಪ್ಪ, ಮುನಿಯಮ್ಮ, ನರಸಿಂಹ, ವೀರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಗುಲಬರ್ಗಾ ವಿಶ್ವವಿದ್ಯಾಲಯದಿಂದ ಬೇರ್ಪಡಿಸಿ ಹೊಸದಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಆರಂಭಗೊಳ್ಳಲಿರುವ ರಾಯಚೂರು ವಿಶ್ವವಿದ್ಯಾಲಯದ ಆಡಳಿತದಲ್ಲಿ ಸ್ಥಳೀಯ ಯರಗೇರಾ ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸಬೇಕು ಎಂದು ಗ್ರಾಮ ಪಂಚಾಯಿತಿ ಸದಸ್ಯರು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನ ಯರಗೇರಾದಲ್ಲಿರುವ ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರವನ್ನು ರಾಯಚೂರು ವಿಶ್ವವಿದ್ಯಾಲಯವನ್ನಾಗಿ ಸ್ಥಾಪನೆ ಮಾಡುತ್ತಿರುವುದು ಜಿಲ್ಲೆಯ ಶೈಕ್ಷಣಿಕ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ. ಈ ಕೇಂದ್ರಕ್ಕೆ 30 ವರ್ಷಗಳ ಹಿಂದೆ 250 ಎಕರೆಗೆ ಜಮೀನು ನೀಡಲಾಗಿದೆ. ಆದ್ದರಿಂದ ಹುದ್ದೆಗಳ ನೇಮಕಾತಿಯಲ್ಲಿ ಯರಗೇರಾ ಸುತ್ತಲಿನ ಯುವಕ ಯುವತಿಯರಿಗೆ ಪ್ರಾತಿನಿಧ್ಯ ನೀಡುವ ಮೂಲಕ ಸ್ಥಳೀಯರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.</p>.<p>ರಾಯಚೂರು ವಿಶ್ವವಿದ್ಯಾಲಯದಲ್ಲಿ ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಿಕೊಳ್ಳುವ ಕಾಯಂ ಹಾಗೂ ಹೊರ ಗುತ್ತಿಗೆಯ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಸ್ಥಳೀಯರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪಂಚಾಯಿತಿ ಅಧ್ಯಕ್ಷೆ ಮಂಗಮ್ಮ, ಸದಸ್ಯರಾದ ಸುಶೀಲಮ್ಮ, ಮೊಹಮ್ಮದ್ ಅಜೀಜ್, ವೆಂಕಟೇಶ್, ಅಸ್ಮತ್ಬೇಗಂ, ಹನುಮಂತ, ಮಲ್ಲೇಶ, ಮಹಮ್ಮದ್ ರಫಿ, ಪಾರ್ವತಿ, ಮಹಾದೇವಮ್ಮ, ನರಸಿಂಹ, ನರಸಿಂಹಲು ನಾಯಕ, ಸೀಮಾನ್, ಲಕ್ಷ್ಮಿ ತಾಯಪ್ಪ, ಮುನಿಯಮ್ಮ, ನರಸಿಂಹ, ವೀರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>